ದಾಬಸ್ಪೇಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಪರ್ಕ ತ್ಯಾಜ್ಯ ವಿಲೇವಾರಿಯಾಗದ ಕಾರಣ ದಾಬಸ್ಪೇಟೆ ಮುಖ್ಯ ರಸ್ತೆಯ ನೀಡವನದ ಹೈವೆ ಪಕ್ಕ ಇರುವ ಸರ್ವಿಸ್ ರಸ್ತೆ ಇಕ್ಕೆಲಗಳಲ್ಲಿ ರಾಶಿಗಟ್ಟಲೇ ಕಸ ಸುರಿಯುತ್ತಿರುವುದರಿಂದ ಗಬ್ಬೆದ್ದು ನಾರುತ್ತಿದೆ.
ಕೋಳಿ ತ್ಯಾಜ್ಯ, ಹೋಟೆಲ್ ತ್ಯಾಜ್ಯ, ಕೊಳೆತ ತರಕಾರಿ ತ್ಯಾಜ್ಯ, ಪ್ಲಾಸ್ಟಿಕ್ ಸೇರಿದಂತೆ ಇತರೆ ತ್ಯಾಜ್ಯವನ್ನು ರಸ್ತೆಯಲ್ಲಿ ಹಾಕಲಾಗುತ್ತಿದೆ. ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಜನ ಓಡಾಡುತ್ತಾರೆ. ಸದ್ಯ ಈ ತ್ಯಾಜ್ಯ ಗಬ್ಬೆದ್ದು ನಾರುತ್ತಿದ್ದು, ಮೂಗು ಮುಚ್ಚಿಕೊಂಡು ಜನ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತ್ಯಾಜ್ಯದಿಂದ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆ ಇದೆ. ತ್ಯಾಜ್ಯ ತಿನ್ನಲು ನೂರಾರು ನಾಯಿಗಳು ಇಲ್ಲಿ ಜಮಾಯಿಸುತ್ತವೆ. ನಾಯಿಗಳು ಒಂದೊಕ್ಕೊಂದು ಕಚ್ಚಾಡುತ್ತ ರಸ್ತೆಗೆ ಬರುತ್ತವೆ. ಆಗ ವಾಹನ ಸವಾರರು ಅಪಘಾತಗಳಿಂದಾಗಿ ಸಾವು-ನೋವು ಅನುಭವಿಸುತ್ತಿದ್ದಾರೆ. ಇರುವ ಕಸ ವಿಲೇವಾರಿ ಮಾಡಲು, ಇನ್ನೂ ಮುಂದೆ ರಸ್ತೆ ಇಕ್ಕೆಲಗಳಲ್ಲಿ ಕಸ ಹಾಕದಂತೆ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಆಟೋ ಡ್ರೈವರ್ ಪ್ರೇಮ್ ಕುಮಾರ್ ದೂರಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…