ನಗರದಲ್ಲಿ ಪ್ರಸ್ತುತ ಚರ್ಚೆಗೆ ಗ್ರಾಸವಾಗಿರೋ ವಿಷಯವೆನೆಂದರೆ ರಸ್ತೆಗಳನ್ನು ಅತಿಕ್ರಮಣ ಮಾಡಿ ಅಪಘಾತ, ವಾಹನ ದಟ್ಟಣೆಗೆ ಕಾರಣವಾಗಿರುವ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆ, ಶೆಡ್, ಅಂಗಡಿಗಳನ್ನ ತೆರವುಗೊಳಿಸುವುದು.
ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿ, ಮನೆ, ಶೆಡ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಹಲವು ಹೋರಾಟಗಾರರು ಮನವಿ ಸಲ್ಲಿಸಿದ್ದಾರೆ. ಈ ಮನವಿ ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ. ರಸ್ತೆ ಬದಿಯಲ್ಲಿನ ವ್ಯಾಪಾರಸ್ಥರಿಗೆ ಎಲ್ಲಿ ನಮ್ಮ ಅಂಗಡಿಗಳನ್ನು ತೆರವುಗೊಳಿಸುತ್ತಾರೋ ಎಂಬ ಸಂಕಷ್ಟದಲ್ಲಿದ್ದಾರೆ.
ಈಗಾಗಲೇ ಹಲವು ದಿನಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ, ತಾಲೂಕು ಆಡಳಿತ, ನಗರಸಭೆ ಹಾಗೂ ಡಿವೈಎಸ್ಪಿ ಅವರಿಗೂ ಮನವಿ ಪತ್ರವನ್ನು ಸಲ್ಲಿಸಲಾಗಿದೆ, ಬೆಸ್ಕಾಂ ಅಧಿಕಾರಿಗಳು ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದಾರೆ, ಲೋಕೋಪಯೋಗಿ ಆಸ್ತಿಗಳನ್ನು ಕಬಳಿಸಲಾಗಿದ್ದು ಅವುಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ರಸ್ತೆ ಒತ್ತುವರಿ ತೆರವಿನ ಕುರಿತು 2006ರಲ್ಲಿ ಸುಪ್ರೀಂಕೋರ್ಟ್ ಆದೇಶ ಮಾಡಿದೆ, 2010ರಲ್ಲಿ ಅದೇ ಆದೇಶವನ್ನು ರಾಜ್ಯ ಸರ್ಕಾರ ಆದೇಶ ಮಾಡಿದೆ, ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ್ ಸಾಲಿಯಾನ ಅವರು ಸಹ ರಸ್ತೆ ಒತ್ತುವರಿ ತೆರವು ಮಾಡುವಂತೆ ಅಧಿಕಾರಿಗಳಿಗೆ ಮೌಖಿಕವಾಗಿ ಆದೇಶಿಸಿದ್ದು ಅವುಗಳನ್ನು ಅಧಿಕಾರಿಗಳು ಪಾಲಿಸಬೇಕು ಎಂದು ತಿಳಿಸಿದರು.
ನಮ್ಮ ಹೋರಾಟ ಸಾರ್ವಜನಿಕರ ಪರವಾಗಿದ್ದು. ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯವಾಗಬೇಕು ತಪ್ಪಿದಲ್ಲಿ ನಮ್ಮ ಹೋರಾಟ ನಿರಂತರವಾಗಿರಲಿದ್ದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.
ರಸ್ತೆ ಬದಿಯಲ್ಲಿನ ಫುಟ್ ಪಾತ್ ಹಾಗೂ ನಗರಸಭೆಗೆ ಸೇರಿದ ಜಾಗವನ್ನು ಆಕ್ರಮಿಸಿಕೊಂಡು ಹೋಟೆಲ್, ಹಣ್ಣಿನ ಅಂಗಡಿ ಹಾಗೂ ಮಾಂಸದ ಮಳಿಗೆಗಳನ್ನು ತೆರೆಯಲಾಗಿದ್ದು ಇತ್ತೀಚೆಗೆ ಸಾರ್ವಜನಿಕರು ಹೆಚ್ಚಿನ ಹಿಂಸೆ ಅನುಭವಿಸುವಂತಾಗಿದೆ ಎಂದರು.
ನಗರದಲ್ಲಿ ಕೈಗಾರಿಕೆ ಹಾಗೂ ಮಗ್ಗಗಳಲ್ಲಿ ಕೆಲಸ ಮಾಡಲು ಪ್ರತೀ ದಿನ 5000 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಓಡಾಡುತ್ತಿದ್ದಾರೆ, ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿದ್ದು ಬೇಸರದ ಸಂಗತಿಯಾಗಿದೆ ಎಂದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…