ನಗರದಲ್ಲಿ ಪ್ರಸ್ತುತ ಚರ್ಚೆಗೆ ಗ್ರಾಸವಾಗಿರೋ ವಿಷಯವೆನೆಂದರೆ ರಸ್ತೆಗಳನ್ನು ಅತಿಕ್ರಮಣ ಮಾಡಿ ಅಪಘಾತ, ವಾಹನ ದಟ್ಟಣೆಗೆ ಕಾರಣವಾಗಿರುವ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆ, ಶೆಡ್, ಅಂಗಡಿಗಳನ್ನ ತೆರವುಗೊಳಿಸುವುದು.
ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿ, ಮನೆ, ಶೆಡ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಹಲವು ಹೋರಾಟಗಾರರು ಮನವಿ ಸಲ್ಲಿಸಿದ್ದಾರೆ. ಈ ಮನವಿ ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ. ರಸ್ತೆ ಬದಿಯಲ್ಲಿನ ವ್ಯಾಪಾರಸ್ಥರಿಗೆ ಎಲ್ಲಿ ನಮ್ಮ ಅಂಗಡಿಗಳನ್ನು ತೆರವುಗೊಳಿಸುತ್ತಾರೋ ಎಂಬ ಸಂಕಷ್ಟದಲ್ಲಿದ್ದಾರೆ.
ಈಗಾಗಲೇ ಹಲವು ದಿನಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ, ತಾಲೂಕು ಆಡಳಿತ, ನಗರಸಭೆ ಹಾಗೂ ಡಿವೈಎಸ್ಪಿ ಅವರಿಗೂ ಮನವಿ ಪತ್ರವನ್ನು ಸಲ್ಲಿಸಲಾಗಿದೆ, ಬೆಸ್ಕಾಂ ಅಧಿಕಾರಿಗಳು ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದಾರೆ, ಲೋಕೋಪಯೋಗಿ ಆಸ್ತಿಗಳನ್ನು ಕಬಳಿಸಲಾಗಿದ್ದು ಅವುಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ರಸ್ತೆ ಒತ್ತುವರಿ ತೆರವಿನ ಕುರಿತು 2006ರಲ್ಲಿ ಸುಪ್ರೀಂಕೋರ್ಟ್ ಆದೇಶ ಮಾಡಿದೆ, 2010ರಲ್ಲಿ ಅದೇ ಆದೇಶವನ್ನು ರಾಜ್ಯ ಸರ್ಕಾರ ಆದೇಶ ಮಾಡಿದೆ, ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ್ ಸಾಲಿಯಾನ ಅವರು ಸಹ ರಸ್ತೆ ಒತ್ತುವರಿ ತೆರವು ಮಾಡುವಂತೆ ಅಧಿಕಾರಿಗಳಿಗೆ ಮೌಖಿಕವಾಗಿ ಆದೇಶಿಸಿದ್ದು ಅವುಗಳನ್ನು ಅಧಿಕಾರಿಗಳು ಪಾಲಿಸಬೇಕು ಎಂದು ತಿಳಿಸಿದರು.
ನಮ್ಮ ಹೋರಾಟ ಸಾರ್ವಜನಿಕರ ಪರವಾಗಿದ್ದು. ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯವಾಗಬೇಕು ತಪ್ಪಿದಲ್ಲಿ ನಮ್ಮ ಹೋರಾಟ ನಿರಂತರವಾಗಿರಲಿದ್ದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.
ರಸ್ತೆ ಬದಿಯಲ್ಲಿನ ಫುಟ್ ಪಾತ್ ಹಾಗೂ ನಗರಸಭೆಗೆ ಸೇರಿದ ಜಾಗವನ್ನು ಆಕ್ರಮಿಸಿಕೊಂಡು ಹೋಟೆಲ್, ಹಣ್ಣಿನ ಅಂಗಡಿ ಹಾಗೂ ಮಾಂಸದ ಮಳಿಗೆಗಳನ್ನು ತೆರೆಯಲಾಗಿದ್ದು ಇತ್ತೀಚೆಗೆ ಸಾರ್ವಜನಿಕರು ಹೆಚ್ಚಿನ ಹಿಂಸೆ ಅನುಭವಿಸುವಂತಾಗಿದೆ ಎಂದರು.
ನಗರದಲ್ಲಿ ಕೈಗಾರಿಕೆ ಹಾಗೂ ಮಗ್ಗಗಳಲ್ಲಿ ಕೆಲಸ ಮಾಡಲು ಪ್ರತೀ ದಿನ 5000 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಓಡಾಡುತ್ತಿದ್ದಾರೆ, ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿದ್ದು ಬೇಸರದ ಸಂಗತಿಯಾಗಿದೆ ಎಂದರು.
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…