ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ: ವ್ಯಾಪಾರಸ್ಥರ ವಿರೋಧ: ಅಧಿಕಾರಿಗಳಿಗೆ ನುಂಗಲಾರದ ತುತ್ತು

ನಗರದಲ್ಲಿ ಪ್ರಸ್ತುತ ಚರ್ಚೆಗೆ ಗ್ರಾಸವಾಗಿರೋ ವಿಷಯವೆನೆಂದರೆ ರಸ್ತೆಗಳನ್ನು ಅತಿಕ್ರಮಣ ಮಾಡಿ ಅಪಘಾತ, ವಾಹನ ದಟ್ಟಣೆಗೆ ಕಾರಣವಾಗಿರುವ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆ, ಶೆಡ್, ಅಂಗಡಿಗಳನ್ನ ತೆರವುಗೊಳಿಸುವುದು.

ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿ, ಮನೆ, ಶೆಡ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಹಲವು ಹೋರಾಟಗಾರರು ಮನವಿ ಸಲ್ಲಿಸಿದ್ದಾರೆ. ಈ ಮನವಿ ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ. ರಸ್ತೆ ಬದಿಯಲ್ಲಿನ ವ್ಯಾಪಾರಸ್ಥರಿಗೆ ಎಲ್ಲಿ ನಮ್ಮ ಅಂಗಡಿಗಳನ್ನು ತೆರವುಗೊಳಿಸುತ್ತಾರೋ ಎಂಬ ಸಂಕಷ್ಟದಲ್ಲಿದ್ದಾರೆ.

ಜನರ ಜೀವ ಹಾಗೂ ಜೀವನ ಮುಖ್ಯ. ನಮ್ಮ ಹೋರಾಟ ಬೀದಿ ಬದಿಯ ವ್ಯಾಪಾರಿಗಳ ವಿರುದ್ಧ ಅಲ್ಲ, ಬದಲಿಗೆ ರಸ್ತೆ ಒತ್ತುವರಿಯನ್ನು ಮಾಡಿಕೊಂಡವರ ವಿರುದ್ಧ ಎಂದು ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಸ್ಪಷ್ಟಪಡಿಸಿದರು.

ಈಗಾಗಲೇ ಹಲವು ದಿನಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ, ತಾಲೂಕು ಆಡಳಿತ, ನಗರಸಭೆ ಹಾಗೂ ಡಿವೈಎಸ್ಪಿ ಅವರಿಗೂ ಮನವಿ ಪತ್ರವನ್ನು ಸಲ್ಲಿಸಲಾಗಿದೆ, ಬೆಸ್ಕಾಂ ಅಧಿಕಾರಿಗಳು ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದಾರೆ, ಲೋಕೋಪಯೋಗಿ ಆಸ್ತಿಗಳನ್ನು ಕಬಳಿಸಲಾಗಿದ್ದು ಅವುಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ರಸ್ತೆ ಒತ್ತುವರಿ ತೆರವಿನ ಕುರಿತು 2006ರಲ್ಲಿ ಸುಪ್ರೀಂಕೋರ್ಟ್ ಆದೇಶ ಮಾಡಿದೆ, 2010ರಲ್ಲಿ ಅದೇ ಆದೇಶವನ್ನು ರಾಜ್ಯ ಸರ್ಕಾರ ಆದೇಶ ಮಾಡಿದೆ, ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಸಂದೀಪ್‌ ಸಾಲಿಯಾನ ಅವರು ಸಹ ರಸ್ತೆ ಒತ್ತುವರಿ ತೆರವು ಮಾಡುವಂತೆ ಅಧಿಕಾರಿಗಳಿಗೆ ಮೌಖಿಕವಾಗಿ ಆದೇಶಿಸಿದ್ದು ಅವುಗಳನ್ನು ಅಧಿಕಾರಿಗಳು ಪಾಲಿಸಬೇಕು ಎಂದು ತಿಳಿಸಿದರು.

ನಮ್ಮ ಹೋರಾಟ ಸಾರ್ವಜನಿಕರ ಪರವಾಗಿದ್ದು. ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯವಾಗಬೇಕು ತಪ್ಪಿದಲ್ಲಿ ನಮ್ಮ ಹೋರಾಟ ನಿರಂತರವಾಗಿರಲಿದ್ದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ನಂತರ ನಗರಸಭೆ ಸದಸ್ಯ ವಡ್ಡರಹಳ್ಳಿ ರವಿ ಮಾತನಾಡಿ, ಬೆಂಗಳೂರು ನಗರದಿಂದ ಕೇವಲ ನಲವತ್ತು ಕಿಲೋ ಮೀಟರ್ ದೂರದಲ್ಲಿರುವ ದೊಡ್ಡಬಳ್ಳಾಪುರ ಇಂದು ಬೃಹತ್ ಆಕಾರದಲ್ಲಿ ಬೆಳೆಯುತ್ತಿದೆ, ನಗರದಲ್ಲಿ 1,75,000 ಕ್ಕಿಂತ ಹೆಚ್ಚು ಜನರು ವಾಸಿಸುತ್ತಿದ್ದು, ಒಂದು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಹಾದು ಹೋಗಿದೆ. ಅಪಘಾತಗಳೂ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿರುವುದು ಆಘಾತಕಾರಿ ಎಂದು ಆತಂಕ ವ್ಯಕ್ತಪಡಿಸಿದರು.

ರಸ್ತೆ ಬದಿಯಲ್ಲಿನ ಫುಟ್ ಪಾತ್ ಹಾಗೂ ನಗರಸಭೆಗೆ ಸೇರಿದ ಜಾಗವನ್ನು ಆಕ್ರಮಿಸಿಕೊಂಡು ಹೋಟೆಲ್, ಹಣ್ಣಿನ ಅಂಗಡಿ ಹಾಗೂ ಮಾಂಸದ ಮಳಿಗೆಗಳನ್ನು ತೆರೆಯಲಾಗಿದ್ದು ಇತ್ತೀಚೆಗೆ ಸಾರ್ವಜನಿಕರು ಹೆಚ್ಚಿನ ಹಿಂಸೆ ಅನುಭವಿಸುವಂತಾಗಿದೆ ಎಂದರು.

ನಗರದಲ್ಲಿ ಕೈಗಾರಿಕೆ ಹಾಗೂ ಮಗ್ಗಗಳಲ್ಲಿ ಕೆಲಸ ಮಾಡಲು ಪ್ರತೀ ದಿನ 5000 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಓಡಾಡುತ್ತಿದ್ದಾರೆ, ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿದ್ದು ಬೇಸರದ ಸಂಗತಿಯಾಗಿದೆ ಎಂದರು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ತಾಲೂಕು ಆಡಳಿತ ಹಾಗೂ ನಗರಸಭೆಯ ಸಮ್ಮುಖದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಲವಾರು ನಿಣ೯ಯ ಕೈಗೊಳ್ಳಲಾಗಿದ್ದು ನಗರ ಪ್ರದೇಶದಲ್ಲಿ ಸ್ವಚ್ಛತೆ, ಚರಂಡಿ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಉತ್ತಮ ಆಡಳಿತ ನಡೆಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

16 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

19 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

2 days ago