ನಗರದಲ್ಲಿ ಪ್ರಸ್ತುತ ಚರ್ಚೆಗೆ ಗ್ರಾಸವಾಗಿರೋ ವಿಷಯವೆನೆಂದರೆ ರಸ್ತೆಗಳನ್ನು ಅತಿಕ್ರಮಣ ಮಾಡಿ ಅಪಘಾತ, ವಾಹನ ದಟ್ಟಣೆಗೆ ಕಾರಣವಾಗಿರುವ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆ, ಶೆಡ್, ಅಂಗಡಿಗಳನ್ನ ತೆರವುಗೊಳಿಸುವುದು.
ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿ, ಮನೆ, ಶೆಡ್ ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಹಲವು ಹೋರಾಟಗಾರರು ಮನವಿ ಸಲ್ಲಿಸಿದ್ದಾರೆ. ಈ ಮನವಿ ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ. ರಸ್ತೆ ಬದಿಯಲ್ಲಿನ ವ್ಯಾಪಾರಸ್ಥರಿಗೆ ಎಲ್ಲಿ ನಮ್ಮ ಅಂಗಡಿಗಳನ್ನು ತೆರವುಗೊಳಿಸುತ್ತಾರೋ ಎಂಬ ಸಂಕಷ್ಟದಲ್ಲಿದ್ದಾರೆ.
ಈಗಾಗಲೇ ಹಲವು ದಿನಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ, ತಾಲೂಕು ಆಡಳಿತ, ನಗರಸಭೆ ಹಾಗೂ ಡಿವೈಎಸ್ಪಿ ಅವರಿಗೂ ಮನವಿ ಪತ್ರವನ್ನು ಸಲ್ಲಿಸಲಾಗಿದೆ, ಬೆಸ್ಕಾಂ ಅಧಿಕಾರಿಗಳು ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದಾರೆ, ಲೋಕೋಪಯೋಗಿ ಆಸ್ತಿಗಳನ್ನು ಕಬಳಿಸಲಾಗಿದ್ದು ಅವುಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ರಸ್ತೆ ಒತ್ತುವರಿ ತೆರವಿನ ಕುರಿತು 2006ರಲ್ಲಿ ಸುಪ್ರೀಂಕೋರ್ಟ್ ಆದೇಶ ಮಾಡಿದೆ, 2010ರಲ್ಲಿ ಅದೇ ಆದೇಶವನ್ನು ರಾಜ್ಯ ಸರ್ಕಾರ ಆದೇಶ ಮಾಡಿದೆ, ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ್ ಸಾಲಿಯಾನ ಅವರು ಸಹ ರಸ್ತೆ ಒತ್ತುವರಿ ತೆರವು ಮಾಡುವಂತೆ ಅಧಿಕಾರಿಗಳಿಗೆ ಮೌಖಿಕವಾಗಿ ಆದೇಶಿಸಿದ್ದು ಅವುಗಳನ್ನು ಅಧಿಕಾರಿಗಳು ಪಾಲಿಸಬೇಕು ಎಂದು ತಿಳಿಸಿದರು.
ನಮ್ಮ ಹೋರಾಟ ಸಾರ್ವಜನಿಕರ ಪರವಾಗಿದ್ದು. ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯವಾಗಬೇಕು ತಪ್ಪಿದಲ್ಲಿ ನಮ್ಮ ಹೋರಾಟ ನಿರಂತರವಾಗಿರಲಿದ್ದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.
ರಸ್ತೆ ಬದಿಯಲ್ಲಿನ ಫುಟ್ ಪಾತ್ ಹಾಗೂ ನಗರಸಭೆಗೆ ಸೇರಿದ ಜಾಗವನ್ನು ಆಕ್ರಮಿಸಿಕೊಂಡು ಹೋಟೆಲ್, ಹಣ್ಣಿನ ಅಂಗಡಿ ಹಾಗೂ ಮಾಂಸದ ಮಳಿಗೆಗಳನ್ನು ತೆರೆಯಲಾಗಿದ್ದು ಇತ್ತೀಚೆಗೆ ಸಾರ್ವಜನಿಕರು ಹೆಚ್ಚಿನ ಹಿಂಸೆ ಅನುಭವಿಸುವಂತಾಗಿದೆ ಎಂದರು.
ನಗರದಲ್ಲಿ ಕೈಗಾರಿಕೆ ಹಾಗೂ ಮಗ್ಗಗಳಲ್ಲಿ ಕೆಲಸ ಮಾಡಲು ಪ್ರತೀ ದಿನ 5000 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಓಡಾಡುತ್ತಿದ್ದಾರೆ, ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಮಗಳು ಸಾವನ್ನಪ್ಪಿದ್ದು ಬೇಸರದ ಸಂಗತಿಯಾಗಿದೆ ಎಂದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…