ರಸ್ತೆ ಒತ್ತುವರಿ ಮಾಡಿ ಮನೆ, ಅಂಗಡಿ ಕಟ್ಟಿರುವವರಿಗೆ ಶಾಕ್..! ಒತ್ತುವರಿ ತೆರವು ಕಾರ್ಯಾಚರಣೆಗಿಳಿದ ಪೌರಾಯುಕ್ತ

ನಗರದಲ್ಲಿ ಅನಧಿಕೃತವಾಗಿ ರಸ್ತೆ ಒತ್ತುವರಿ ಮಾಡಿ ವ್ಯಾಪಾರ ವಹಿವಾಟು, ವಾಸ ಇರೋದಕ್ಕೆ ನಿರ್ಮಿಸಿಕೊಂಡಿದ್ದ ಮನೆ, ಅಂಗಡಿಗಳನ್ನು ತೆರವು ಮಾಡುತ್ತಿರುವ ನಗರಸಭೆ ಪೌರಾಯುಕ್ತ ಪರಮೇಶ್ ನೇತೃತ್ವದ ತಂಡ.

ದಿನೇ ದಿನೇ ನಗರದಲ್ಲಿ ಹೆಚ್ಚುತ್ತಿರುವ ಅಪಘಾತ, ವಾಹನ ದಟ್ಟಣೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿರುವ ಹಿನ್ನೆಲೆ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರೋ ಅಂಗಡಿ, ಶೆಡ್, ಮನೆಗಳನ್ನು ತೆರವುಗೊಳಿಸುವಂತೆ ಹಲವು ಸಂಘಟನೆಗಳು, ಸಾರ್ವಜನಿಕರ ಮನವಿ ಮೇರೆಗೆ ನಗರಸಭೆ, ಲೋಕೋಪಯೋಗಿ ‌ಇಲಾಖೆ, ಪೊಲೀಸ್ ಇಲಾಖೆ ವತಿಯಿಂದ ತೆರವು ಕಾರ್ಯಾಚರಣೆ ನಡೆಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ(ಟಿ.ಬಿ.ಸರ್ಕಲ್), ಬಯಲು ಬಸವಣ್ಣ ದೇವಸ್ಥಾನದ ಸುತ್ತಮುತ್ತಲಿನ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆ ಬದಿಯಲ್ಲಿರುವ ಅಂಗಡಿ, ಶೆಡ್ ಗಳನ್ನು ತೆರವುಗೊಳಿಸಲಾಯಿತು. ಇನ್ನೂ ಮುಂದೆ ರಸ್ತೆ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿರುವವರ ತೆರವು ಕೂಡ ಮಾಡಲಾಗುವುದು ಎಂದು ಪೌರಾಯುಕ್ತ ಪರಮೇಶ್ ತಿಳಿಸಿದರು.

ತೆರವು ಕಾರ್ಯಾಚರಣೆ ವೇಳೆ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಪರಿಸರ ವಿಭಾಗದ ಎಂಜಿನಿಯರ್ ಈರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

21 minutes ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

2 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

5 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

16 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

17 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

21 hours ago