Categories: ಕೋಲಾರ

ರಸ್ತೆ ಕಾಮಗಾರಿ ವಿಳಂಬ ನಮಗೆಲ್ಲ ಧೂಳಿನ ಭಾಗ್ಯ: ಗ್ರಾಮಸ್ಥರ ಆರೋಪ

ಕೋಲಾರ: ತಾಲೂಕಿನ ನರಸಾಪುರ ಗ್ರಾಮದಲ್ಲಿನ ಬೆಂಗಳೂರು-ಕೋಲಾರದ ಮುಖ್ಯ ರಸ್ತೆಯ ಕಾಮಗಾರಿ ಪ್ರಾರಂಭವಾಗಿ ಸುಮಾರು ದಿನಗಳಾದರೂ ಕಾಮಗಾರಿ ಮುಗಿಸಿಲ್ಲ ಎಂದು ನರಸಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು,

ಈ ಸಂದರ್ಭದಲ್ಲಿ ನರಸಾಪುರ ಗ್ರಾಮ ಸದಸ್ಯ ಕೆಇಬಿ ಚಂದ್ರು ಮಾತನಾಡಿ ಕಾಮಗಾರಿ ಪ್ರಾರಂಭ ಮಾಡಿ ಸುಮಾರು 8 ತಿಂಗಳು ಆಗಿದ್ದರೂ ಇದುವರೆಗೂ ಗುತ್ತಿಗೆಯದಾರು ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ ಪೂರ್ಣಗೊಳಿಸುವಂತೆ ಒತ್ತಾಯ ಮಾಡಿದರು ಕಾಲಹರಣ ಮಾಡುತ್ತಾ ನಮಗೆ ಧೂಳಿನ ಭಾಗ್ಯ ನೀಡಿದ್ದಾರೆ ಎಂದು ಆರೋಪಿಸಿದರು,

ನರಸಾಪುರ ಕೈಗಾರಿಕಾ ಪ್ರದೇಶವಾಗಿರುವುದರಿಂದ ಜನಸಂಖ್ಯೆ ಹೆಚ್ಚಾಗಿದೆ, ಕೈಗಾರಿಕಾ ಪ್ರದೇಶಕ್ಕೆ ಓಡಾಡುವ ಬೃಹತ್ ಪ್ರಮಾಣದ ವಾಹನಗಳು ಹಾಗೂ ಇತರೆ ಎಲ್ಲಾ ರೀತಿಯ ಸಾವಿರಾರು ವಾಹನಗಳು ಇದೇ ರಸ್ತೆಯ ಮೂಲಕ ಪ್ರತಿನಿತ್ಯ ಓಡಾಡುವುದರಿಂದ ರಸ್ತೆಯ ಮೇಲಿರುವ ದೂಳು ಚಿಮಣಿಯಿಂದ ಬರುವ ಹೊಗೆಯ ರೀತಿಯಲ್ಲಿ ಬರುತ್ತದೆ, ಇದರಿಂದ ರಸ್ತೆಯ ಪಕ್ಕದಲ್ಲಿನ ಅಂಗಡಿಗಳ ವ್ಯಾಪಾರಿಗಳಿಗೆ ತೊಂದರೆಯಾಗಿದೆ ಗುತ್ತಿಗೆದಾರನು ಅನೇಕ ಕಾರಣಗಳನ್ನು ನೀಡಿ ವಿಳಂಬ ಮಾಡುತ್ತಾ ಬರುತ್ತಿದ್ದಾರೆ, ರಸ್ತೆಗೆ ಧೂಳು ಹೇಳದಂತೆ ಸರಿಯಾಗಿ ನೀರನ್ನು ಸಹ ಹಾಕುತಿಲ್ಲ, ಧೂಳು ಮುಕ್ತ ನರಸಾಪುರ ಗ್ರಾಮ ಮಾಡಬೇಕೆಂದು ರಸ್ತೆಗೆ ಡಾಂಬರನ್ನು ಕೂಡಲೇ ಹಾಕಬೇಕೆಂದು ಆಗ್ರಹಿಸಿದರು,

ತಾಪಂ ಮಾಜಿ ಸದಸ್ಯ ಎನ್. ಕೆ. ನಾಗರಾಜ್ ಮಾತನಾಡಿ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ಹಾಗೂ ಗುತ್ತಿಗೆದಾರನ ಬಳಿ ಹೋದರು ಏನು ಪ್ರಯೋಜನವಾಗಿಲ್ಲ, ಇದೇ ರಸ್ತೆಯಲ್ಲಿ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಹೋಗಬೇಕಾಗಿದ್ದು, ಈ ರಸ್ತೆಯಲ್ಲಿನ ಧೂಳಿನ ಪ್ರಭಾವದಿಂದ ವಿದ್ಯಾರ್ಥಿಗಳ ಪೋಷಕರು ಸರ್ಕಾರಿ ಶಾಲೆಗೆ ಕಳುಹಿಸಲು ಆತಂಕ ವ್ಯಕ್ತಪಡಿಸಿದ್ದಾರೆ, ಆದಷ್ಟು ಬೇಗನೆ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದು ಒತ್ತಾಯಿಸಿದರು,

ಗುತ್ತಿಗೆದಾರ ಚಂಬೆ ನಾರಾಯಣಸ್ವಾಮಿ ಪ್ರತಿಭಟನೆ ಸ್ಥಳಕ್ಕೆ ಬಂದು ಮಾತನಾಡಿ ಕೆಲವೊಂದು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು, ಮುಂದಿನ ಮಂಗಳವಾರ ಅಥವಾ ಬುಧವಾರದ ಒಳಗೆ ರಸ್ತೆಗೆ ಡಾಂಬರು ಹಾಕಿ ಕಾಮಗಾರಿಯನ್ನು ಮುಕ್ತಾಯಗೊಳಿಸಿಕೊಡಲಾಗುತ್ತದೆ ಇಂಜಿನಿಯರ್ ಯಾವ ರೀತಿ ಪ್ಲಾನ್ ಹಾಕಿದ್ದಾರೆ ಅದರಂತೆ ಕೆಲಸ ಮಾಡಲಾಗುತ್ತದೆ ಎಂದರು,

ನರಸಾಪುರ ಗ್ರಾಮದ ಎಲ್ಲಾ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನೆಗೆ ಸಹಕಾರ ನೀಡಿದರು, ಸ್ಥಳದಲ್ಲಿ ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಗದೀಶ್ ಇದ್ದರು

ಪ್ರತಿಭಟನೆಯಲ್ಲಿ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ, ದಲಿತ ಸಂಘಟನೆ ಮುಖಂಡ ಪುರಹಳ್ಳಿ ಯಲ್ಲಪ್ಪ, ನರಸಾಪುರ ಗ್ರಾಮದ ಮುಖಂಡರುಗಳಾದ ಕುಮಾರ್, ಬಿ ಶ್ರೀನಿವಾಸ್, ಎನ್.ಪಿ ಶ್ರೀನಿವಾಸ್, ಭಾನುಪ್ರಕಾಶ್, ಓಂ ಪ್ರಕಾಶ್, ಗೋಪಿ, ಸುಮನ್, ಮುನಿರಾಜು ಸತೀಶ್, ಶೇಖರ್, ರಾಜೇಂದ್ರ, ಎಲ್. ನಾಗರಾಜ್ ಪಾನಿಪುರಿ ವೆಂಕಟೇಶ್, ಟಿ ಬಾಬು, ಕೃಷ್ಣಪ್ಪ, ಟಿಪ್ಪು, ಉಮೇಶ್, ವರ್ತಕರ ಸಂಘದ ಪದಾಧಿಕಾರಿಗಳು, ಅಂಗಡಿಗಳ ಮಾಲೀಕರಗಳು ಹಾಗೂ ನೂರಾರು ಮುಖಂಡರುಗಳು ಹಾಜರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

51 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago