ರಸ್ತೆ ಗುಂಡಿ ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು- ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಸೂಚನೆಗಳನ್ನು ನೀಡಿದೆ.

ಸಭೆಯ ಮುಖ್ಯಾಂಶಗಳು ಹೀಗಿವೆ:

* ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ.

* ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು.

* ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

* ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು,
ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಬೇಕು.

* ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ, ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು.

* ಬಿಡಿಎ, ಬಿಎಂಆರ್‌ಸಿಎಲ್, ಜಲಮಂಡಳಿ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು.

* ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು.

* ಮುಖ್ಯ ಆಯುಕ್ತರು ಪ್ರತಿ ವಾರ ಐದೂ ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.

* ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.
* ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು

* ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ
1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.

* ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು, 8,046 ಗುಂಡಿಗಳು ಮುಚ್ಚಲು ಬಾಕಿ ಇವೆ.

* ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.

* ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.

* ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ರೂ. 25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.

* ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು ರೂ. 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.

* ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು.

* ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್ ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ರೂ.400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ದಿ ಪಡಿಸಲು ಉದ್ದೇಶಿಸಲಾಗಿದೆ.

* ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago