ರಸ್ತೆ ಗುಂಡಿ ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು- ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಸೂಚನೆಗಳನ್ನು ನೀಡಿದೆ.

ಸಭೆಯ ಮುಖ್ಯಾಂಶಗಳು ಹೀಗಿವೆ:

* ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ.

* ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು.

* ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

* ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು,
ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಬೇಕು.

* ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ, ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು.

* ಬಿಡಿಎ, ಬಿಎಂಆರ್‌ಸಿಎಲ್, ಜಲಮಂಡಳಿ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು.

* ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು.

* ಮುಖ್ಯ ಆಯುಕ್ತರು ಪ್ರತಿ ವಾರ ಐದೂ ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.

* ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.
* ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು

* ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ
1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.

* ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು, 8,046 ಗುಂಡಿಗಳು ಮುಚ್ಚಲು ಬಾಕಿ ಇವೆ.

* ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.

* ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.

* ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ರೂ. 25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.

* ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು ರೂ. 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.

* ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು.

* ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್ ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ರೂ.400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ದಿ ಪಡಿಸಲು ಉದ್ದೇಶಿಸಲಾಗಿದೆ.

* ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

17 minutes ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

38 minutes ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

11 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

13 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago