ನೆಲಮಂಗಲ ಸಂಚಾರ ಪೊಲೀಸ್ ಠಾಣಾ ಸರಹದಿನ ಲಕ್ಷ್ಮಿಪುರ ಕ್ರಾಸ್, ಮಾದನಾಯಕನಹಳ್ಳಿ ಬಳಿ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ ರಸ್ತೆಗೆ ಮೆಟ್ರೋ ಕಾಮಗಾರಿ ಗಾಡಿಯಿಂದ ಟಾರ್ ಕಡಿಯನ್ನು ಗುಂಡಿಗೆ ಹಾಕಿಸಿ ಸಾರ್ವಜನಿಕರಿಗೆ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಸ್ತೆಯಲ್ಲಿ ಬಿದ್ದ ಗುಂಡಿಗಳಿಂದ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿತ್ತು. ಕೆಲವೊಮ್ಮೆ ಈ ರಸ್ತೆ ಗುಂಡಿಗಳಿಂದ ಅಪಘಾತಗಳು ಸಂಭವಿಸಿ ಗಂಭೀರ ಗಾಯಗಳಿಂದ ವಾಹನ ಸವಾರರು ನೋವನ್ನು ಅನುಭವಿಸಿದ್ದರು.
ಈ ಹಿನ್ನೆಲೆ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ ರಸ್ತೆಗೆ ಮೆಟ್ರೋ ಕಾಮಗಾರಿ ಗಾಡಿಯಿಂದ ಟಾರ್ ಕಡಿಯನ್ನು ಗುಂಡಿಗೆ ಹಾಕಿಸಿ, ಸ್ವತಃ ತಾವೇ ಗುಂಡಿ ಮುಚ್ಚುವ ಕೆಲಸ ಮಾಡಿ ಸಾರ್ವಜನಿಕರಿಗೆ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…