ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲ- ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್

ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಕಸದ ರಾಶಿಗಳಿಂದಾಗಿ ಸಾರ್ವಜನಿಕರು ಮೂಗುಮುಚ್ಚಿಕೊಂಡು ಓಡಾಡುವಂತಾಗಿದೆ ಎಂದು ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್ ದೂರಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಅವರ ಅಧ್ಯಕ್ಷಯೆಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ನೀಡಲಾಗಿದ್ದ ಸ್ಥಳ ವಿವಾದ ನ್ಯಾಯಾಲಯದಲ್ಲಿ ಇರುವುದರಿಂದ ಬಾಡಿಗೆ ಕಟ್ಟಡದಲ್ಲಿ ತಾಲ್ಲೂಕು ಗ್ರಂಥಾಲಯ ಕಾರ್ಯನಿರ್ವಹಿಸುವಂತಾಗಿದೆ. ನಗರಸಭೆ ವತಿಯಿಂದ ಸೂಕ್ತ ಸ್ಥಳ ನೀಡುವ ಮೂಲಕ ಸಾವಿರಾರು ಜನ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಬಳಕೆಯಾಗುವಂತೆ ಮಾಡಬೇಕಿದೆ ಎಂದರು.

ಸ್ವಚ್ಛತೆಯ ವಿಚಾರದಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ವಾರ್ಡ್ ಗಳಲ್ಲಿ ಸ್ವಚ್ಛತೆ ಇಲ್ಲದೇ ಇರುವುದರಿಂದ ಜನರು ಕೇಳುವ ಪ್ರಶ್ನೆಗೆ ಉತ್ತರ ಹೇಳುವುದೇ ಕಷ್ಟವಾಗಿದೆ ಎಂದು ಸದಸ್ಯರಾದ ಇದ್ರಾಂಣಿ, ನಾಗಮಣಿ, ಸುಮಿತ್ರ ಅವರು ಪರಿಸರ ವಿಭಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹತ್ತಾರು ವರ್ಷಗಳಿಂದಲು ಬಡ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಹಾಗೆಯೇ ಬಡವರ ಆರೋಗ್ಯಕ್ಕು ಕನಿಷ್ಠ ಮೊತ್ತದ ನೆರವನ್ನು ನೀಡಲಾಗುತಿತ್ತು. ಆದರೆ ಕಳೆದ ಎರಡು ವರ್ಷಗಳಿಂದಲು ಇದಕ್ಕೆ ಅವಕಾಶ ಇಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ. ನಮ್ಮ ತೆರೆಗೆ ಹಣವನ್ನು ನಾವು  ಖರ್ಚು ಮಾಡುವುದಕ್ಕೆ ಅಧಿಕಾರ ಇಲ್ಲ ಅಂದಮೇಲೆ ನಮ್ಮ ತೆರಿಗೆಯ ಮೇಲೆ ನಮಗೆ ಹಕ್ಕು ಇಲ್ಲವೆ ಎಂದು ಸದಸ್ಯರಾದ ಎಂ.ಜಿ.ಶ್ರೀನಿವಾಸ್, ಟಿ.ಎನ್.ಪ್ರಭುದೇವ್ ಪೌರಾಯುಕ್ತರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಪೌರಾಯುಕ್ತ ಕೆ.ಪರಮೇಶ್, ಸದಸ್ಯರ ಸಲಹೆಯಂತೆ ಬಜೆಟ್ನಲ್ಲಿ ಹಣ ಮೀಸಲಿಡುವ ಮೂಲಕ ವಿದ್ಯಾರ್ಥಿ ವೇತನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ನಗರದಲ್ಲಿ ಎಷ್ಟು ವಾಣಿಜ್ಯ ಮಳಿಗೆ, ಮನೆಗಳ ಖಾತೆಗಳು ಇವೆ, ಇವುಗಳಿಂದ ಎಷ್ಟು ತೆರಿಗೆ ವಸೂಲಿ ಬಾಕಿ ಇದೆ. ಬರಬೇಕಿರುವ ತೆರಿಗೆಯ ಬಾಕಿ ಎಷ್ಟು ಎನ್ನುವ ಲೆಕ್ಕವೇ ನಗರಸಭೆಯಲ್ಲಿ ಇಲ್ಲದೇ ಇರುವುದು ಅಧಿಕಾರಿಗಳ ನಿರ್ಲಕ್ಷ್ಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸಾರ್ವಜನಿಕರು ಪ್ರಶ್ನಿಸಿದರೆ ಉತ್ತರ ನೀಡುವುದಾದರು ಹೇಗೆ.ಖಾತೆದಾರರು ಕಟ್ಟುವ ತೆರಿಗೆ ಅಂಕಿ ಅಂಶಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದೇ ಕಂದಾಯ ವಿಭಾಗದ ಅಧಿಕಾರಿಗಳು ಮಾಡುವ ಕೆಲಸವಾದರು ಏನಿದೆ ಎಂದು ಪ್ರಶ್ನಿಸಿದ ಸದಸ್ಯ ಎಂ.ಜಿ.ಶ್ರೀನಿವಾಸ್.

ನಗರಸಭೆಗೆ ನ್ಯಾಯುತವಾಗಿ ಬರಬೇಕಿರುವ ಕೋಟ್ಯಾಂತರ ರೂಪಾಯಿ ತೆರಿಗೆ ಹಣ ನಷ್ಟವಾಗುತ್ತಿದೆ. ಸೂಕ್ತ ಅಂಕಿ ಅಂಶಗಳು ಗಣಕೀಕೃತವಾಗಬೇಕು. ನಮ್ಮಲ್ಲಿ ಸೂಕ್ತ ದಾಖಲಾತಿಯೇ ಇಲ್ಲದೆ ಖಾತೆದಾರರಿಂದ ತೆರಿಗೆ ವಸೂಲಿ ಮಾಡುವುದಕ್ಕೆ ಅರ್ಥವಾದರು ಇದೆಯೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ಒಳಚರಂಡಿ ವ್ಯವಸ್ಥೆ ಜಾರಿಗೆ ಬಂದು ದಶಕಗಳೆ ಕಳೆಯುತ್ತ ಬಂದಿದೆ. ಆದರೆ ಎಷ್ಟು ಸಂಪರ್ಕಗಳು ಇವೆ, ಇನ್ನು ಸಂಪರ್ಕ ಪಡೆಯದೇ ಇರುವ ಕುಟುಂಬಗಳು ಎಷ್ಟು, ವಾಣಿಜ್ಯ ಮಳಿಗೆಗಳ ಪರವಾನಗಿಯ ಮಾಹಿತಿಯು ನಗರಸಭೆಯಲ್ಲಿ ಇಲ್ಲದಾಗಿದೆ. ಈ ಎಲ್ಲವು ಸೂಕ್ತ ರೀತಿಯಲ್ಲಿ ನಿರ್ವಹಣೆಯಾದರೆ ಸರ್ಕಾರದ ಅನುದಾನ ಇಲ್ಲದೆಯೇ ನಮ್ಮ ತೆರಿಗೆ ಹಣದಲ್ಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಸಲು ಸಾಧ್ಯವಿದೆ ಎಂದರು.

ಸದಸ್ಯರಿಗೆ ಒಂದು ವಾರಗಳ ಕಾಲ ನೀಡಲಾದ ತರಬೇತಿಯಲ್ಲಿ ಅಧ್ಯಕ್ಷರು ಸಹ ಭಾಗವಹಿಸಿದ್ದರು. ಅಧ್ಯಕ್ಷರ ಅಪ್ಪಣೆ ಮೇರೆಗೆ ತುರ್ತು ಕಾಮಗಾರಿಗಳಿಗೆ ಮಾತ್ರ 4 ರಿಂದ 6 ಕೆಲಸಗಳಿಗೆ ಒಪ್ಪಿಗೆ ನೀಡಬಹುದು. ಉಳಿದೆ ಎಲ್ಲಾ ವಿಷಯಗಳು ಸಾಮಾನ್ಯ ಸಭೆಯಲ್ಲಿ ಚರ್ಚೆಯ ನಂತರವೇ ಕೈಗೊಳ್ಳಬೇಕು ಎಂದು ಪಾಠ ಮಾಡಿದ್ದಾರೆ ಎಂದು ಸಭೆಗೆ ಗಮನಕ್ಕೆ ತಂದ ಸದಸ್ಯೆ ಪ್ರಭಾನಾಗರಾಜ್, ಆದರೆ ಇಲ್ಲಿ ನಿಯಮ ಮೀರಿ 17 ವಿಷಯಗಳು ಅಧ್ಯಕ್ಷರ ಅಪ್ಪಣೆ ಮೇರೆಗೆ ನಡೆಸಲಾಗಿದೆ. ಹೀಗಾದರೆ ಸದಸ್ಯರು ಹೇಳುವ ಯಾವುದೇ ಕೆಲಸಗಳಿಗು ಬೆಲೆ ಇಲ್ಲವೆ ಎಂದು ಪ್ರಶ್ನಿಸಿದರು.

ಸದಸ್ಯ ಎಚ್.ಎಸ್. ಶಿವಶಂಕರ್ ಮಾತನಾಡಿ, ಯಾವುದೇ ರೀತಿಯ ಕೊಟೆಷನ್ ಪಡೆಯದೆ, ಟೆಂಡರ್ ಸಹ ಕರೆಯದೆ ಪೌರಕಾರ್ಮಿಕರಿಗೆ ಸುಮಾರು ₹6 ಲಕ್ಷ ವೆಚ್ಚಮಾಡಿ ಕುಕ್ಕರ್ ಖರೀದಿಸಲಾಗಿದೆ. ಇದೇ ನಿಯಮವನ್ನು ಇತರೆ ಖರೀದಿಗಳು, ಕಾಮಗಾರಿಗಳಿಗು ಅನ್ವಯವಾಗಬೇಕು. ಅಧ್ಯಕ್ಷರ ಅಪ್ಪಣೆಯ ಮೇರೆಗೆ ಖರೀದಿಗಳು ನಡೆಯುವುದಾದರೆ ಸದಸ್ಯರ ಅನುಮತಿ ಏಕೆ ಬೇಕು ಎಂದು ಪ್ರಶ್ನಿಸಿದರು.

ಇದಕ್ಕೆ ಧ್ವನಿ ಗೂಡಿಸಿದ ಸದಸ್ಯರಾದ ಪ್ರಭಾ, ಎಂ.ಜಿ.ಶ್ರೀನಿವಾಸ್, ಬಂತಿವೆಂಕಟೇಶ್, ಆನಂದ್, ಹೆಚ್ಚಿನ ಮೊತ್ತದ ಯಾವುದೇ ವಸ್ತುಗಳ ಖರೀದಿಗೆ ಕೇವಲ ಕೋಟೆಷನ್ ಪಡೆದು ಖರೀದಿ ಮಾಡುವ ನಿಯಮ ನಗರಸಭೆಯ ನಿಯಮಗಳಿಗೆ ವಿರುದ್ದವಾಗಿದೆ. ಇವುಗಳು ಮತ್ತೆ ಮರುಕಳಿಸದಂತೆ ಕ್ರಮ ಅಗತ್ಯ ಎಂದರು.

ಸ್ಥಾತಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ಸದಸ್ಯರ ಗಮನಕ್ಕೆ ಬಾರದಂತೆ ಕುಕ್ಕರ್ ಖರೀದಿ ಮಾಡಿರುವುದು ಸದಸ್ಯರ ಸಲಹೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

11 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

24 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago