ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲ- ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್

ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಕಸದ ರಾಶಿಗಳಿಂದಾಗಿ ಸಾರ್ವಜನಿಕರು ಮೂಗುಮುಚ್ಚಿಕೊಂಡು ಓಡಾಡುವಂತಾಗಿದೆ ಎಂದು ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್ ದೂರಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಅವರ ಅಧ್ಯಕ್ಷಯೆಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ನೀಡಲಾಗಿದ್ದ ಸ್ಥಳ ವಿವಾದ ನ್ಯಾಯಾಲಯದಲ್ಲಿ ಇರುವುದರಿಂದ ಬಾಡಿಗೆ ಕಟ್ಟಡದಲ್ಲಿ ತಾಲ್ಲೂಕು ಗ್ರಂಥಾಲಯ ಕಾರ್ಯನಿರ್ವಹಿಸುವಂತಾಗಿದೆ. ನಗರಸಭೆ ವತಿಯಿಂದ ಸೂಕ್ತ ಸ್ಥಳ ನೀಡುವ ಮೂಲಕ ಸಾವಿರಾರು ಜನ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಬಳಕೆಯಾಗುವಂತೆ ಮಾಡಬೇಕಿದೆ ಎಂದರು.

ಸ್ವಚ್ಛತೆಯ ವಿಚಾರದಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ವಾರ್ಡ್ ಗಳಲ್ಲಿ ಸ್ವಚ್ಛತೆ ಇಲ್ಲದೇ ಇರುವುದರಿಂದ ಜನರು ಕೇಳುವ ಪ್ರಶ್ನೆಗೆ ಉತ್ತರ ಹೇಳುವುದೇ ಕಷ್ಟವಾಗಿದೆ ಎಂದು ಸದಸ್ಯರಾದ ಇದ್ರಾಂಣಿ, ನಾಗಮಣಿ, ಸುಮಿತ್ರ ಅವರು ಪರಿಸರ ವಿಭಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಹತ್ತಾರು ವರ್ಷಗಳಿಂದಲು ಬಡ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಹಾಗೆಯೇ ಬಡವರ ಆರೋಗ್ಯಕ್ಕು ಕನಿಷ್ಠ ಮೊತ್ತದ ನೆರವನ್ನು ನೀಡಲಾಗುತಿತ್ತು. ಆದರೆ ಕಳೆದ ಎರಡು ವರ್ಷಗಳಿಂದಲು ಇದಕ್ಕೆ ಅವಕಾಶ ಇಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ. ನಮ್ಮ ತೆರೆಗೆ ಹಣವನ್ನು ನಾವು  ಖರ್ಚು ಮಾಡುವುದಕ್ಕೆ ಅಧಿಕಾರ ಇಲ್ಲ ಅಂದಮೇಲೆ ನಮ್ಮ ತೆರಿಗೆಯ ಮೇಲೆ ನಮಗೆ ಹಕ್ಕು ಇಲ್ಲವೆ ಎಂದು ಸದಸ್ಯರಾದ ಎಂ.ಜಿ.ಶ್ರೀನಿವಾಸ್, ಟಿ.ಎನ್.ಪ್ರಭುದೇವ್ ಪೌರಾಯುಕ್ತರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಪೌರಾಯುಕ್ತ ಕೆ.ಪರಮೇಶ್, ಸದಸ್ಯರ ಸಲಹೆಯಂತೆ ಬಜೆಟ್ನಲ್ಲಿ ಹಣ ಮೀಸಲಿಡುವ ಮೂಲಕ ವಿದ್ಯಾರ್ಥಿ ವೇತನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ನಗರದಲ್ಲಿ ಎಷ್ಟು ವಾಣಿಜ್ಯ ಮಳಿಗೆ, ಮನೆಗಳ ಖಾತೆಗಳು ಇವೆ, ಇವುಗಳಿಂದ ಎಷ್ಟು ತೆರಿಗೆ ವಸೂಲಿ ಬಾಕಿ ಇದೆ. ಬರಬೇಕಿರುವ ತೆರಿಗೆಯ ಬಾಕಿ ಎಷ್ಟು ಎನ್ನುವ ಲೆಕ್ಕವೇ ನಗರಸಭೆಯಲ್ಲಿ ಇಲ್ಲದೇ ಇರುವುದು ಅಧಿಕಾರಿಗಳ ನಿರ್ಲಕ್ಷ್ಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸಾರ್ವಜನಿಕರು ಪ್ರಶ್ನಿಸಿದರೆ ಉತ್ತರ ನೀಡುವುದಾದರು ಹೇಗೆ.ಖಾತೆದಾರರು ಕಟ್ಟುವ ತೆರಿಗೆ ಅಂಕಿ ಅಂಶಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದೇ ಕಂದಾಯ ವಿಭಾಗದ ಅಧಿಕಾರಿಗಳು ಮಾಡುವ ಕೆಲಸವಾದರು ಏನಿದೆ ಎಂದು ಪ್ರಶ್ನಿಸಿದ ಸದಸ್ಯ ಎಂ.ಜಿ.ಶ್ರೀನಿವಾಸ್.

ನಗರಸಭೆಗೆ ನ್ಯಾಯುತವಾಗಿ ಬರಬೇಕಿರುವ ಕೋಟ್ಯಾಂತರ ರೂಪಾಯಿ ತೆರಿಗೆ ಹಣ ನಷ್ಟವಾಗುತ್ತಿದೆ. ಸೂಕ್ತ ಅಂಕಿ ಅಂಶಗಳು ಗಣಕೀಕೃತವಾಗಬೇಕು. ನಮ್ಮಲ್ಲಿ ಸೂಕ್ತ ದಾಖಲಾತಿಯೇ ಇಲ್ಲದೆ ಖಾತೆದಾರರಿಂದ ತೆರಿಗೆ ವಸೂಲಿ ಮಾಡುವುದಕ್ಕೆ ಅರ್ಥವಾದರು ಇದೆಯೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ಒಳಚರಂಡಿ ವ್ಯವಸ್ಥೆ ಜಾರಿಗೆ ಬಂದು ದಶಕಗಳೆ ಕಳೆಯುತ್ತ ಬಂದಿದೆ. ಆದರೆ ಎಷ್ಟು ಸಂಪರ್ಕಗಳು ಇವೆ, ಇನ್ನು ಸಂಪರ್ಕ ಪಡೆಯದೇ ಇರುವ ಕುಟುಂಬಗಳು ಎಷ್ಟು, ವಾಣಿಜ್ಯ ಮಳಿಗೆಗಳ ಪರವಾನಗಿಯ ಮಾಹಿತಿಯು ನಗರಸಭೆಯಲ್ಲಿ ಇಲ್ಲದಾಗಿದೆ. ಈ ಎಲ್ಲವು ಸೂಕ್ತ ರೀತಿಯಲ್ಲಿ ನಿರ್ವಹಣೆಯಾದರೆ ಸರ್ಕಾರದ ಅನುದಾನ ಇಲ್ಲದೆಯೇ ನಮ್ಮ ತೆರಿಗೆ ಹಣದಲ್ಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಸಲು ಸಾಧ್ಯವಿದೆ ಎಂದರು.

ಸದಸ್ಯರಿಗೆ ಒಂದು ವಾರಗಳ ಕಾಲ ನೀಡಲಾದ ತರಬೇತಿಯಲ್ಲಿ ಅಧ್ಯಕ್ಷರು ಸಹ ಭಾಗವಹಿಸಿದ್ದರು. ಅಧ್ಯಕ್ಷರ ಅಪ್ಪಣೆ ಮೇರೆಗೆ ತುರ್ತು ಕಾಮಗಾರಿಗಳಿಗೆ ಮಾತ್ರ 4 ರಿಂದ 6 ಕೆಲಸಗಳಿಗೆ ಒಪ್ಪಿಗೆ ನೀಡಬಹುದು. ಉಳಿದೆ ಎಲ್ಲಾ ವಿಷಯಗಳು ಸಾಮಾನ್ಯ ಸಭೆಯಲ್ಲಿ ಚರ್ಚೆಯ ನಂತರವೇ ಕೈಗೊಳ್ಳಬೇಕು ಎಂದು ಪಾಠ ಮಾಡಿದ್ದಾರೆ ಎಂದು ಸಭೆಗೆ ಗಮನಕ್ಕೆ ತಂದ ಸದಸ್ಯೆ ಪ್ರಭಾನಾಗರಾಜ್, ಆದರೆ ಇಲ್ಲಿ ನಿಯಮ ಮೀರಿ 17 ವಿಷಯಗಳು ಅಧ್ಯಕ್ಷರ ಅಪ್ಪಣೆ ಮೇರೆಗೆ ನಡೆಸಲಾಗಿದೆ. ಹೀಗಾದರೆ ಸದಸ್ಯರು ಹೇಳುವ ಯಾವುದೇ ಕೆಲಸಗಳಿಗು ಬೆಲೆ ಇಲ್ಲವೆ ಎಂದು ಪ್ರಶ್ನಿಸಿದರು.

ಸದಸ್ಯ ಎಚ್.ಎಸ್. ಶಿವಶಂಕರ್ ಮಾತನಾಡಿ, ಯಾವುದೇ ರೀತಿಯ ಕೊಟೆಷನ್ ಪಡೆಯದೆ, ಟೆಂಡರ್ ಸಹ ಕರೆಯದೆ ಪೌರಕಾರ್ಮಿಕರಿಗೆ ಸುಮಾರು ₹6 ಲಕ್ಷ ವೆಚ್ಚಮಾಡಿ ಕುಕ್ಕರ್ ಖರೀದಿಸಲಾಗಿದೆ. ಇದೇ ನಿಯಮವನ್ನು ಇತರೆ ಖರೀದಿಗಳು, ಕಾಮಗಾರಿಗಳಿಗು ಅನ್ವಯವಾಗಬೇಕು. ಅಧ್ಯಕ್ಷರ ಅಪ್ಪಣೆಯ ಮೇರೆಗೆ ಖರೀದಿಗಳು ನಡೆಯುವುದಾದರೆ ಸದಸ್ಯರ ಅನುಮತಿ ಏಕೆ ಬೇಕು ಎಂದು ಪ್ರಶ್ನಿಸಿದರು.

ಇದಕ್ಕೆ ಧ್ವನಿ ಗೂಡಿಸಿದ ಸದಸ್ಯರಾದ ಪ್ರಭಾ, ಎಂ.ಜಿ.ಶ್ರೀನಿವಾಸ್, ಬಂತಿವೆಂಕಟೇಶ್, ಆನಂದ್, ಹೆಚ್ಚಿನ ಮೊತ್ತದ ಯಾವುದೇ ವಸ್ತುಗಳ ಖರೀದಿಗೆ ಕೇವಲ ಕೋಟೆಷನ್ ಪಡೆದು ಖರೀದಿ ಮಾಡುವ ನಿಯಮ ನಗರಸಭೆಯ ನಿಯಮಗಳಿಗೆ ವಿರುದ್ದವಾಗಿದೆ. ಇವುಗಳು ಮತ್ತೆ ಮರುಕಳಿಸದಂತೆ ಕ್ರಮ ಅಗತ್ಯ ಎಂದರು.

ಸ್ಥಾತಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ಸದಸ್ಯರ ಗಮನಕ್ಕೆ ಬಾರದಂತೆ ಕುಕ್ಕರ್ ಖರೀದಿ ಮಾಡಿರುವುದು ಸದಸ್ಯರ ಸಲಹೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago