ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ: ದರ ನಿಗದಿ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 56513 ಹೆಕ್ಟೇ‌ರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದ್ದು, ಕೆಲವೆಡೆ ಕಾಳು ತುಂಬುವ ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ರೂ. 3500 ರಿಂದ ರೂ. 4000 ಗಳ ವರೆಗೆ ಬಾಡಿಗೆ ಹಣ ನಿಗದಿ ಪಡಿಸಿರುವ ಬಗ್ಗೆ ದೇವನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರು ಬಂದಿರುತ್ತದೆ.

ಪ್ರಸ್ತುತ ಸಾಲಿನಲ್ಲಿ ಮಳೆ ಕೊರತೆಯುಂಟಾಗಿ ಬೆಳೆಯು ಹಾನಿಯಾಗಿರುವುದರಿಂದ ರೈತರಿಗೆ ತೀವ್ರ ಆರ್ಥಿಕ ಹೊರೆಯಾಗಲಿದೆ. ಆದುದರಿಂದ ದಿನಾಂಕ: 06.07.2022ರಂದು ಜಿಲ್ಲಾ ಸಮನ್ವಯ ಸಮಿತಿಯ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರ ಅಧ್ಯಕ್ಷತೆಯಲ್ಲಿ ಕೃಷಿ ಯಂತ್ರಧಾರೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ)ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿಪಡಿಸಲಾಗಿದೆ. ಇಂಧನ ವೆಚ್ಚ, ಕಾರ್ಮಿಕರ ಕೂಲಿ ಹಾಗೂ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಪ್ರತಿ ಗಂಟೆಗೆ ನ್ಯೂ ಹಾಲೆಂಡ್, ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ರೂ. 3350 ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತಕ್ಕೆ ರೂ. 2700 ಗೆ ಬಾಡಿಗೆ ನಿಗದಿಪಡಿಸಲಾಗಿದೆ.

ಅದರಂತೆ ಜಿಲ್ಲೆಯಲ್ಲಿ ರಾಗಿ ಬೆಳೆ ಕಟಾವು ಮಾಡುತ್ತಿರುವ ನ್ಯೂ ಹಾಲೆಂಡ್,  ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ರೂ. 3350 ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ರೂ. 2700 ಗಳು ಮೀರದಂತೆ ಪ್ರತಿ ಗಂಟೆಗೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

3 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

3 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

8 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

20 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

21 hours ago