ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 56513 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದ್ದು, ಕೆಲವೆಡೆ ಕಾಳು ತುಂಬುವ ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ರೂ. 3500 ರಿಂದ ರೂ. 4000 ಗಳ ವರೆಗೆ ಬಾಡಿಗೆ ಹಣ ನಿಗದಿ ಪಡಿಸಿರುವ ಬಗ್ಗೆ ದೇವನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರು ಬಂದಿರುತ್ತದೆ.
ಅದರಂತೆ ಜಿಲ್ಲೆಯಲ್ಲಿ ರಾಗಿ ಬೆಳೆ ಕಟಾವು ಮಾಡುತ್ತಿರುವ ನ್ಯೂ ಹಾಲೆಂಡ್, ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ರೂ. 3350 ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ರೂ. 2700 ಗಳು ಮೀರದಂತೆ ಪ್ರತಿ ಗಂಟೆಗೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…