ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 56513 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದ್ದು, ಕೆಲವೆಡೆ ಕಾಳು ತುಂಬುವ ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ರೂ. 3500 ರಿಂದ ರೂ. 4000 ಗಳ ವರೆಗೆ ಬಾಡಿಗೆ ಹಣ ನಿಗದಿ ಪಡಿಸಿರುವ ಬಗ್ಗೆ ದೇವನಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರು ಬಂದಿರುತ್ತದೆ.
ಅದರಂತೆ ಜಿಲ್ಲೆಯಲ್ಲಿ ರಾಗಿ ಬೆಳೆ ಕಟಾವು ಮಾಡುತ್ತಿರುವ ನ್ಯೂ ಹಾಲೆಂಡ್, ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ರೂ. 3350 ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ರೂ. 2700 ಗಳು ಮೀರದಂತೆ ಪ್ರತಿ ಗಂಟೆಗೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…