ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 69,230 ಹೆಕ್ಟೇರ್ ಪ್ರದೇಶದಲ್ಲಿ ಆವರಿಸಿದ್ದು, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3500 ರೂಗಳಿಂದ 4000 ರೂಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.
ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 3350 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಗಂಟೆಗೆ 2700 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…