ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 61,513 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿದೆ.
ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.
ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 2700 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಗಂಟೆಗೆ 2200 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ.
ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…