ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 61,513 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿದೆ.
ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.
ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 2700 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಗಂಟೆಗೆ 2200 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ.
ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…