ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯು 61,513 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ, ಬಹುತೇಕ ರಾಗಿ ಬೆಳೆಯು ತೆನೆ ತುಂಬುವ ಹಾಗೂ ಕಟಾವು ಹಂತದಲ್ಲಿದೆ.
ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ (combined harvesters) ಮೂಲಕ ಕಟಾವು ಕೈಗೊಳ್ಳುತ್ತಿದ್ದು, ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಬಾಡಿಗೆ ಹಣ ಪಡೆಯುತ್ತಿರುವ ಬಗ್ಗೆ ಜಿಲ್ಲೆಯ ರೈತರುಗಳಿಂದ ದೂರು ಬಂದಿರುತ್ತದೆ.
ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರಸ್ತುತ ಇಂಧನ ವೆಚ್ಚ ಹಾಗೂ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಾಗಿದ್ದು, ಇತರೇ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಕಳೆದ ವರ್ಷ ನಿರ್ಧರಿಸಿದಂತೆ, ಪ್ರತಿ ಗಂಟೆಗೆ ನ್ಯೂ ಹಾಲೆಂಡ್/ ಜಾನ್ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರಕ್ಕೆ ಗಂಟೆಗೆ 2700 ರೂಗಳು ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ ಗಂಟೆಗೆ 2200 ರೂಗಳು ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ.
ತಪ್ಪಿದ್ದಲ್ಲಿ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…