*ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ*

ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3500 ರೂ. ಗಳಿಂದ 4 ಸಾವಿರ ರೂ.ಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಕುರಿತು ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ನಿರ್ದಿಷ್ಟ ಕಂಪನಿಗಳ ದೊಡ್ಡ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ ನಿಗದಿತ 3350 ರೂ. ಹಾಗೂ ಸಣ್ಣ ಯಂತ್ರಗಳಿಗೆ 2700 ರೂ.ಬಾಡಿಗೆ ಮಾತ್ರ ಸಂಗ್ರಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 57370 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆ ಆವರಿಸಿದೆ.ಈಗ ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದೆ. ಕಟಾವು ಕಾರ್ಯ ಪ್ರಗತಿಯಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವ ಕಾರ್ಯವನ್ನು ಯಂತ್ರಗಳ (combined harvesters) ಮೂಲಕ ಕೈಗೊಳ್ಳುತ್ತಿದ್ದಾರೆ‌.

ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗುವುದನ್ನು ತಪ್ಪಿಸಲು ಜುಲೈ 6 ರಂದು ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಯಂತ್ರಧಾರೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ) ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಿದ ಪ್ರಕಾರ, ಪ್ರಸ್ತುತ ಇಂಧನ ವೆಚ್ಚ , ಕಾರ್ಮಿಕರ ಕೂಲಿ ವೆಚ್ಚ ಮತ್ತು ಇತರ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ ನ್ಯೂ ಹಾಲೆಂಡ್, ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರ 3350 ರೂ. ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ 2700 ರೂ. ಪರಿಷ್ಕರಿಸಿ ಬಾಡಿಗೆ ನಿಗದಿಪಡಿಸಲಾಗಿದೆ.

ಈ ದರಗಳನ್ನು ಮೀರದಂತೆ ಬಾಡಿಗೆಯನ್ನು ಸಂಗ್ರಹಿಸಬೇಕು. ತಪ್ಪಿದರೆ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

10 minutes ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

2 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

7 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

10 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

12 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

23 hours ago