ಕಳೆದ ಬಾರಿ ರಾಗಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿದ್ದ ರೈತರಿಗೆ ಕಳಪೆ ಚೀಲಗಳನ್ನು ನೀಡಿದ್ದಾರೆ. ಸರಕಾರ ಒಂದು ಚೀಲಕ್ಕೆ ೪೪ ರೂಪಾಯಿಗಳಿಗೆ ಟೆಂಡರ್ ಮಾಡಿದೆ. ಆದರೆ ಹರಿದ ಚೀಲಗಳನ್ನು ರೈತರಿಗೆ ನೀಡಲಾಗುತ್ತಿದೆ. ಬದಲಾಗಿ ಚೀಲಗಳನ್ನು ಕೊಡುವುದನ್ನು ಬಿಟ್ಟು ರೈತರ ಖಾತೆಗೆ ಚೀಲಗಳ ಹಣವನ್ನು ಸಂದಾಯ ಮಾಡಿ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಹನುಮಂತರಾಯಪ್ಪ ಆಗ್ರಹಿಸಿದರು
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಇಬ್ಬರಿಗೆ ಚೀಲ ವಿತರಣೆಯ ಗುತ್ತಿಗೆ ಪಡೆದಿದ್ದರು. ಆದರೆ ಈ ಪೈಕಿ ಎಲ್ಲಾ ರೈತರಿಗೂ ಚೀಲ ವಿತರಣೆ ಮಾಡಿಲ್ಲ. ಪರಿಣಾಮ ಸರ್ಕಾರದ ಸಂಬಂಧಿತ ಇಲಾಖೆಯಿಂದ ನೊಟೀಸ್ ಜಾರಿ ಮಾಡಿದ್ದಾರೆ. ಕಳಪೆ ಚೀಲ ನೀಡಿರುವ ಕುರಿತು ಸರ್ಕಾರ ತನಿಖೆಗೆ ಆದೇಶ ಮಾಡಬೇಕು. ಹಾಗೂ ಚೀಲದ ಬದಲು ಚೀಲದ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ನಾಗದೇನಹಳ್ಳಿ ಎ.ಆನಂದಮೂರ್ತಿ, ಬೆಸ್ಕಾಂ ವಿದ್ಯುತ್ ಗುತ್ತಿಗೆದಾರ ಶಿವಶಂಕರ್, ರಾಜ್ಯ ಉಪಾಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಹೇಮಂತ್, ದೊಡ್ಡಬಳ್ಳಾಪುರ ತಾ.ಅಧ್ಯಕ್ಷ ಎಸ್.ಬಿ.ರಮೇಶ್, ಬೆಂಗಳೂರು ಗ್ರಾಮಾಂತರ ಉಪಾಧ್ಯಕ್ಷ ತ್ಯಾಗರಾಜು, ದೇವನಹಳ್ಳಿ ತಾಲೂಕು ಅಧ್ಯಕ್ಷ ಆರ್.ಕೆ.ಎಂ ಗೌಡ, ದೇವನಹಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ, ರೈತರಾದ ಚನ್ನರಾಯಪ್ಪ, ಬೈರೇಗೌಡ ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…