ರಾಗಿ ಖರೀದಿಯ ಚೀಲದಲ್ಲಿ ಅವ್ಯವಹಾರದ ಆರೋಪ: ಚೀಲ ಬೇಡ ಖಾತೆಗೆ ಹಣ ಜಮಾ ಮಾಡಿ: ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಆಗ್ರಹ

ಕಳೆದ ಬಾರಿ ರಾಗಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿದ್ದ ರೈತರಿಗೆ ಕಳಪೆ ಚೀಲಗಳನ್ನು ನೀಡಿದ್ದಾರೆ. ಸರಕಾರ ಒಂದು ಚೀಲಕ್ಕೆ ೪೪ ರೂಪಾಯಿಗಳಿಗೆ ಟೆಂಡರ್ ಮಾಡಿದೆ. ಆದರೆ ಹರಿದ ಚೀಲಗಳನ್ನು ರೈತರಿಗೆ ನೀಡಲಾಗುತ್ತಿದೆ. ಬದಲಾಗಿ ಚೀಲಗಳನ್ನು ಕೊಡುವುದನ್ನು ಬಿಟ್ಟು ರೈತರ ಖಾತೆಗೆ ಚೀಲಗಳ ಹಣವನ್ನು ಸಂದಾಯ ಮಾಡಿ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಹನುಮಂತರಾಯಪ್ಪ ಆಗ್ರಹಿಸಿದರು

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಇಬ್ಬರಿಗೆ ಚೀಲ ವಿತರಣೆಯ ಗುತ್ತಿಗೆ ಪಡೆದಿದ್ದರು. ಆದರೆ ಈ ಪೈಕಿ ಎಲ್ಲಾ ರೈತರಿಗೂ ಚೀಲ ವಿತರಣೆ ಮಾಡಿಲ್ಲ. ಪರಿಣಾಮ ಸರ್ಕಾರದ ಸಂಬಂಧಿತ ಇಲಾಖೆಯಿಂದ ನೊಟೀಸ್ ಜಾರಿ ಮಾಡಿದ್ದಾರೆ. ಕಳಪೆ ಚೀಲ ನೀಡಿರುವ ಕುರಿತು ಸರ್ಕಾರ ತನಿಖೆಗೆ ಆದೇಶ ಮಾಡಬೇಕು. ಹಾಗೂ ಚೀಲದ ಬದಲು ಚೀಲದ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ನಾಗದೇನಹಳ್ಳಿ ಎ.ಆನಂದಮೂರ್ತಿ, ಬೆಸ್ಕಾಂ ವಿದ್ಯುತ್ ಗುತ್ತಿಗೆದಾರ ಶಿವಶಂಕರ್, ರಾಜ್ಯ ಉಪಾಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಹೇಮಂತ್, ದೊಡ್ಡಬಳ್ಳಾಪುರ ತಾ.ಅಧ್ಯಕ್ಷ ಎಸ್.ಬಿ.ರಮೇಶ್, ಬೆಂಗಳೂರು ಗ್ರಾಮಾಂತರ ಉಪಾಧ್ಯಕ್ಷ ತ್ಯಾಗರಾಜು, ದೇವನಹಳ್ಳಿ ತಾಲೂಕು ಅಧ್ಯಕ್ಷ ಆರ್.ಕೆ.ಎಂ ಗೌಡ, ದೇವನಹಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ, ರೈತರಾದ ಚನ್ನರಾಯಪ್ಪ, ಬೈರೇಗೌಡ ಇದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 hour ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

5 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

6 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

8 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

8 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

12 hours ago