ರಾಗಿ ಖರೀದಿಯ ಚೀಲದಲ್ಲಿ ಅವ್ಯವಹಾರದ ಆರೋಪ: ಚೀಲ ಬೇಡ ಖಾತೆಗೆ ಹಣ ಜಮಾ ಮಾಡಿ: ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಆಗ್ರಹ

ಕಳೆದ ಬಾರಿ ರಾಗಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿದ್ದ ರೈತರಿಗೆ ಕಳಪೆ ಚೀಲಗಳನ್ನು ನೀಡಿದ್ದಾರೆ. ಸರಕಾರ ಒಂದು ಚೀಲಕ್ಕೆ ೪೪ ರೂಪಾಯಿಗಳಿಗೆ ಟೆಂಡರ್ ಮಾಡಿದೆ. ಆದರೆ ಹರಿದ ಚೀಲಗಳನ್ನು ರೈತರಿಗೆ ನೀಡಲಾಗುತ್ತಿದೆ. ಬದಲಾಗಿ ಚೀಲಗಳನ್ನು ಕೊಡುವುದನ್ನು ಬಿಟ್ಟು ರೈತರ ಖಾತೆಗೆ ಚೀಲಗಳ ಹಣವನ್ನು ಸಂದಾಯ ಮಾಡಿ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಹನುಮಂತರಾಯಪ್ಪ ಆಗ್ರಹಿಸಿದರು

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಇಬ್ಬರಿಗೆ ಚೀಲ ವಿತರಣೆಯ ಗುತ್ತಿಗೆ ಪಡೆದಿದ್ದರು. ಆದರೆ ಈ ಪೈಕಿ ಎಲ್ಲಾ ರೈತರಿಗೂ ಚೀಲ ವಿತರಣೆ ಮಾಡಿಲ್ಲ. ಪರಿಣಾಮ ಸರ್ಕಾರದ ಸಂಬಂಧಿತ ಇಲಾಖೆಯಿಂದ ನೊಟೀಸ್ ಜಾರಿ ಮಾಡಿದ್ದಾರೆ. ಕಳಪೆ ಚೀಲ ನೀಡಿರುವ ಕುರಿತು ಸರ್ಕಾರ ತನಿಖೆಗೆ ಆದೇಶ ಮಾಡಬೇಕು. ಹಾಗೂ ಚೀಲದ ಬದಲು ಚೀಲದ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ನಾಗದೇನಹಳ್ಳಿ ಎ.ಆನಂದಮೂರ್ತಿ, ಬೆಸ್ಕಾಂ ವಿದ್ಯುತ್ ಗುತ್ತಿಗೆದಾರ ಶಿವಶಂಕರ್, ರಾಜ್ಯ ಉಪಾಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಹೇಮಂತ್, ದೊಡ್ಡಬಳ್ಳಾಪುರ ತಾ.ಅಧ್ಯಕ್ಷ ಎಸ್.ಬಿ.ರಮೇಶ್, ಬೆಂಗಳೂರು ಗ್ರಾಮಾಂತರ ಉಪಾಧ್ಯಕ್ಷ ತ್ಯಾಗರಾಜು, ದೇವನಹಳ್ಳಿ ತಾಲೂಕು ಅಧ್ಯಕ್ಷ ಆರ್.ಕೆ.ಎಂ ಗೌಡ, ದೇವನಹಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ, ರೈತರಾದ ಚನ್ನರಾಯಪ್ಪ, ಬೈರೇಗೌಡ ಇದ್ದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

2 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

18 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

22 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago