ಕಳೆದ ಬಾರಿ ರಾಗಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿದ್ದ ರೈತರಿಗೆ ಕಳಪೆ ಚೀಲಗಳನ್ನು ನೀಡಿದ್ದಾರೆ. ಸರಕಾರ ಒಂದು ಚೀಲಕ್ಕೆ ೪೪ ರೂಪಾಯಿಗಳಿಗೆ ಟೆಂಡರ್ ಮಾಡಿದೆ. ಆದರೆ ಹರಿದ ಚೀಲಗಳನ್ನು ರೈತರಿಗೆ ನೀಡಲಾಗುತ್ತಿದೆ. ಬದಲಾಗಿ ಚೀಲಗಳನ್ನು ಕೊಡುವುದನ್ನು ಬಿಟ್ಟು ರೈತರ ಖಾತೆಗೆ ಚೀಲಗಳ ಹಣವನ್ನು ಸಂದಾಯ ಮಾಡಿ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಹನುಮಂತರಾಯಪ್ಪ ಆಗ್ರಹಿಸಿದರು
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಇಬ್ಬರಿಗೆ ಚೀಲ ವಿತರಣೆಯ ಗುತ್ತಿಗೆ ಪಡೆದಿದ್ದರು. ಆದರೆ ಈ ಪೈಕಿ ಎಲ್ಲಾ ರೈತರಿಗೂ ಚೀಲ ವಿತರಣೆ ಮಾಡಿಲ್ಲ. ಪರಿಣಾಮ ಸರ್ಕಾರದ ಸಂಬಂಧಿತ ಇಲಾಖೆಯಿಂದ ನೊಟೀಸ್ ಜಾರಿ ಮಾಡಿದ್ದಾರೆ. ಕಳಪೆ ಚೀಲ ನೀಡಿರುವ ಕುರಿತು ಸರ್ಕಾರ ತನಿಖೆಗೆ ಆದೇಶ ಮಾಡಬೇಕು. ಹಾಗೂ ಚೀಲದ ಬದಲು ಚೀಲದ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ನಾಗದೇನಹಳ್ಳಿ ಎ.ಆನಂದಮೂರ್ತಿ, ಬೆಸ್ಕಾಂ ವಿದ್ಯುತ್ ಗುತ್ತಿಗೆದಾರ ಶಿವಶಂಕರ್, ರಾಜ್ಯ ಉಪಾಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಹೇಮಂತ್, ದೊಡ್ಡಬಳ್ಳಾಪುರ ತಾ.ಅಧ್ಯಕ್ಷ ಎಸ್.ಬಿ.ರಮೇಶ್, ಬೆಂಗಳೂರು ಗ್ರಾಮಾಂತರ ಉಪಾಧ್ಯಕ್ಷ ತ್ಯಾಗರಾಜು, ದೇವನಹಳ್ಳಿ ತಾಲೂಕು ಅಧ್ಯಕ್ಷ ಆರ್.ಕೆ.ಎಂ ಗೌಡ, ದೇವನಹಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ, ರೈತರಾದ ಚನ್ನರಾಯಪ್ಪ, ಬೈರೇಗೌಡ ಇದ್ದರು.
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…