Oplus_131072
ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.
ರಾಗಿ ಕೇಂದ್ರದ ಬಳಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೌಡಾಯಿಸಿದರು. ರಾಗಿ ಖರೀದಿ ಕೇಂದ್ರದ ಬಳಿ ಶೌಚಾಲಯ ಇಲ್ಲದೇ ಇರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ, ನೀವು ಯಾವಾತ್ತಾದರು ರಾಗಿ ಖರೀದಿ ಕೇಂದ್ರಕ್ಕೆ ಬಂದು ಪರಿಶೀಲನೆ ಮಾಡಿದ್ದೀರಾ ಎಂದು ಎಸಿ ಹಾಗೂ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳದಲ್ಲಿ ಕುಡಿಯುವ ನೀರು, ಗಂಡು, ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ವ್ಯವಸ್ಥೆ, ಮೂರು ಶೌಚಾಲಯ ವ್ಯವಸ್ಥೆಯನ್ನು ಮೂರು ದಿನದೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.
ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾಮಹೇಶ್, ಸಿಬ್ಬಂದಿ ಇದ್ದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…