Oplus_131072
ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.
ರಾಗಿ ಕೇಂದ್ರದ ಬಳಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೌಡಾಯಿಸಿದರು. ರಾಗಿ ಖರೀದಿ ಕೇಂದ್ರದ ಬಳಿ ಶೌಚಾಲಯ ಇಲ್ಲದೇ ಇರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ, ನೀವು ಯಾವಾತ್ತಾದರು ರಾಗಿ ಖರೀದಿ ಕೇಂದ್ರಕ್ಕೆ ಬಂದು ಪರಿಶೀಲನೆ ಮಾಡಿದ್ದೀರಾ ಎಂದು ಎಸಿ ಹಾಗೂ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳದಲ್ಲಿ ಕುಡಿಯುವ ನೀರು, ಗಂಡು, ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ವ್ಯವಸ್ಥೆ, ಮೂರು ಶೌಚಾಲಯ ವ್ಯವಸ್ಥೆಯನ್ನು ಮೂರು ದಿನದೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.
ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾಮಹೇಶ್, ಸಿಬ್ಬಂದಿ ಇದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…