Oplus_131072
ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.
ರಾಗಿ ಕೇಂದ್ರದ ಬಳಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೌಡಾಯಿಸಿದರು. ರಾಗಿ ಖರೀದಿ ಕೇಂದ್ರದ ಬಳಿ ಶೌಚಾಲಯ ಇಲ್ಲದೇ ಇರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ, ನೀವು ಯಾವಾತ್ತಾದರು ರಾಗಿ ಖರೀದಿ ಕೇಂದ್ರಕ್ಕೆ ಬಂದು ಪರಿಶೀಲನೆ ಮಾಡಿದ್ದೀರಾ ಎಂದು ಎಸಿ ಹಾಗೂ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳದಲ್ಲಿ ಕುಡಿಯುವ ನೀರು, ಗಂಡು, ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ವ್ಯವಸ್ಥೆ, ಮೂರು ಶೌಚಾಲಯ ವ್ಯವಸ್ಥೆಯನ್ನು ಮೂರು ದಿನದೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.
ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾಮಹೇಶ್, ಸಿಬ್ಬಂದಿ ಇದ್ದರು.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…