Oplus_131072
ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.
ರಾಗಿ ಕೇಂದ್ರದ ಬಳಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೌಡಾಯಿಸಿದರು. ರಾಗಿ ಖರೀದಿ ಕೇಂದ್ರದ ಬಳಿ ಶೌಚಾಲಯ ಇಲ್ಲದೇ ಇರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ, ನೀವು ಯಾವಾತ್ತಾದರು ರಾಗಿ ಖರೀದಿ ಕೇಂದ್ರಕ್ಕೆ ಬಂದು ಪರಿಶೀಲನೆ ಮಾಡಿದ್ದೀರಾ ಎಂದು ಎಸಿ ಹಾಗೂ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳದಲ್ಲಿ ಕುಡಿಯುವ ನೀರು, ಗಂಡು, ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ವ್ಯವಸ್ಥೆ, ಮೂರು ಶೌಚಾಲಯ ವ್ಯವಸ್ಥೆಯನ್ನು ಮೂರು ದಿನದೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.
ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾಮಹೇಶ್, ಸಿಬ್ಬಂದಿ ಇದ್ದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…