Oplus_131072
ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.
ರಾಗಿ ಕೇಂದ್ರದ ಬಳಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೌಡಾಯಿಸಿದರು. ರಾಗಿ ಖರೀದಿ ಕೇಂದ್ರದ ಬಳಿ ಶೌಚಾಲಯ ಇಲ್ಲದೇ ಇರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ, ನೀವು ಯಾವಾತ್ತಾದರು ರಾಗಿ ಖರೀದಿ ಕೇಂದ್ರಕ್ಕೆ ಬಂದು ಪರಿಶೀಲನೆ ಮಾಡಿದ್ದೀರಾ ಎಂದು ಎಸಿ ಹಾಗೂ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳದಲ್ಲಿ ಕುಡಿಯುವ ನೀರು, ಗಂಡು, ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ವ್ಯವಸ್ಥೆ, ಮೂರು ಶೌಚಾಲಯ ವ್ಯವಸ್ಥೆಯನ್ನು ಮೂರು ದಿನದೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.
ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾಮಹೇಶ್, ಸಿಬ್ಬಂದಿ ಇದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…