Oplus_131072
ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ ರೈತರು ತಮ್ಮ ಸಮಸ್ಯೆಗಳನ್ನು ಉಪಲೋಕಾಯುಕ್ತ ಬಿ.ವೀರಪ್ಪ ಅವರ ಬಳಿ ಹೇಳಿಕೊಂಡರು.
ರಾಗಿ ಕೇಂದ್ರದ ಬಳಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೌಡಾಯಿಸಿದರು. ರಾಗಿ ಖರೀದಿ ಕೇಂದ್ರದ ಬಳಿ ಶೌಚಾಲಯ ಇಲ್ಲದೇ ಇರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ, ನೀವು ಯಾವಾತ್ತಾದರು ರಾಗಿ ಖರೀದಿ ಕೇಂದ್ರಕ್ಕೆ ಬಂದು ಪರಿಶೀಲನೆ ಮಾಡಿದ್ದೀರಾ ಎಂದು ಎಸಿ ಹಾಗೂ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳದಲ್ಲಿ ಕುಡಿಯುವ ನೀರು, ಗಂಡು, ಮಹಿಳೆ, ಅಂಗವಿಕಲರಿಗಾಗಿ ಪ್ರತ್ಯೇಕ ಮೂರು ಬಯೋಮೆಟ್ರಿಕ್ ವ್ಯವಸ್ಥೆ, ಮೂರು ಶೌಚಾಲಯ ವ್ಯವಸ್ಥೆಯನ್ನು ಮೂರು ದಿನದೊಳಗಾಗಿ ಮಾಡಿಸಬೇಕು ಎಂದು ತಾಕೀತು ಮಾಡಿದರು.
ಬೆಂ.ಗ್ರಾ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರ್, ಡಿವೈಎಸ್ಪಿ ವೆಂಕಟೇಶ್, ಇನ್ಸ್ ಪೆಕ್ಟರ್ ರಮೇಶ್, ಚಂದ್ರಕಾಂತ್, ನಂದಕುಮಾರ್, ಹಾಲಪ್ಪ ಬಾಲದಂಡಿ, ಉಮಾಮಹೇಶ್, ಸಿಬ್ಬಂದಿ ಇದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…