ರಾಗಿ ಖರೀದಿ ಕೇಂದ್ರಕ್ಕೆ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ. ರೈತರು ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ವಿಜಯಪುರ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಗೊದಾಮು ಇಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4290 ರೂಪಾಯಿ, ಪ್ರತಿ ಕ್ವಿಂಟಾಲ್ ಬಿಳಿ ಜೋಳ ಹೈಬ್ರಿಡ್ ಧಾನ್ಯ ಕ್ಕೆ 3371 ರೂಪಾಯಿ, ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 2300 ರೂಪಾಯಿ ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ರಾಗಿ ಗರಿಷ್ಠ 20.00 ಕ್ವಿಂಟಾಲ್‌, ಬಿಳಿ ಜೋಳ ಹೈಬ್ರಿಡ್ 150 ಕ್ವಿಂಟಾಲ್, ಭತ್ತ ಸಾಮಾನ್ಯ 50 ಕ್ವಿಂಟಾಲ್ ಖರೀದಿಸಲು ನಿಗದಿಪಡಿಸಲಾಗಿದೆ.

ಪ್ರಸಕ್ತ ಸಾಲಿನ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ಬಳಕೆಯಾಗುತ್ತದೆ ಒಂದು ಬಾರಿ ನೊಂದಣಿ ವೇಳೆಯಲ್ಲಿ ಇನ್ನೊಂದು ಬಾರಿ ಖರೀದಿ ವೇಳೆಯಲ್ಲಿ ಹಾಗಾಗಿ ನೊಂದಾಯಿತ ರೈತರೇ ರಾಗಿ ಖರೀದಿ ಕೇಂದ್ರಗಳಿಗೆ ರಾಗಿ ತರುವುದು ಕಡ್ಡಾಯವಾಗಿರುತ್ತದೆ. ನೊಂದಣಿಯಾದ ರೈತರಿಂದ ಮಾತ್ರ ರಾಗಿ ಖರೀದಿ ಮಾಡಲಾಗುವುದು. ಜನವರಿ ಮಾಹೆಯಿಂದ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಿ ಮಾರ್ಚ್ 31 ಕ್ಕೆ ಅಂತ್ಯಗೊಳಿಸಲಾಗುವುದು ಎಂದರು.

ರೈತರು ಎಫ್.ಎಕ್ಯೂ ಗುಣಮಟ್ಟದ ರಾಗಿ, ಭತ್ತ, ಬಿಳಿ ಜೋಳವನ್ನು ಖರೀದಿ ಕೇಂದ್ರಗಳಿಗೆ ತರುವ ಮುನ್ನ ಸಮೀಪವಿರುವ ಖರೀದಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಬಯೋ ಮೆಟ್ರಿಕ್ ಮೂಲಕ ನೋಂದಣಿ ಮಾಡಿಸಬೇಕು.

ಕೃಷಿ ಇಲಾಖೆಯಿಂದ ರೈತರಿಗೆ ನೀಡಲಾಗಿರುವ “ಫೂಟ್ಸ್” ಐ.ಡಿ.(FRUITS) ಸಂಖ್ಯೆಯನ್ನು ಪಡೆದು ರಾಗಿ ಖರೀದಿ ಕೇಂದ್ರದಲ್ಲಿ ನೊಂದಾಯಿಸಿಕೊಳ್ಳುವುದು. ಫೂಟ್ಸ್ ಐ.ಡಿ. ಇಲ್ಲದ ರೈತರ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಇರುವುದಿಲ್ಲ ಹಾಗೂ ನೊಂದಾಣಿ ಸಮಯದಲ್ಲಿ ರೈತರು ತಮ್ಮ ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ರೈತರು ಖರೀದಿ ಕೇಂದ್ರಕ್ಕೆ ಆಹಾರ ಧಾನ್ಯ ನೀಡಿ ಗ್ರೈನ್ ವೋಚರ್ ಪಡೆದ ನಂತರವೇ ಆಧಾರ್ ಕಾರ್ಡ್ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣವನ್ನು ಪಾವತಿಸಲಾಗುವುದು ಎಂದರು.

ಸಭೆಯಲ್ಲಿ ಬಯಪ ಅಧ್ಯಕ್ಷ ಶಾಂತಕುಮಾರ್, ಸ್ಥಳೀಯ ಜನಪ್ರತಿನಿಧಿಗಳು, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಆಹಾರ ಇಲಾಖೆ ಉಪನಿರ್ದೇಶಕ ಶಂಕರ್ ಮೂರ್ತಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

*ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳ ತೆರೆಯುವ ಸ್ಥಳಗಳು*

*ದೇವನಹಳ್ಳಿ*
ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಗೋದಾಮು ವಿಜಯಪುರ ರಸ್ತೆ, ದೇವನಹಳ್ಳಿ ಟೌನ್.

*ಹೊಸಕೋಟೆ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.

*ದೊಡ್ಡಬಳ್ಳಾಪುರ*
ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.

*ನೆಲಮಂಗಲ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.

Ramesh Babu

Journalist

Recent Posts

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

2 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

5 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

7 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

18 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

18 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

20 hours ago