ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಸ್ಥೆ: ವರ್ಷಕ್ಕೊಂದು ನಿಯಮ ಜಾರಿ: ಎರಡು ಬಾರಿ ಬಯೋಮೆಟ್ರಿಕ್ ತಗೊಳೋದು ಏಕೆ..?- ರೈತರ ಆರೋಪ, ಆಕ್ರೋಶ

ದೊಡ್ಡಬಳ್ಳಾಪುರದಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿ ಆರಂಭವಾಗಿ ಕೆಲವೇ ದಿನಗಳಲ್ಲಿ ಹಲವು ಸಮಸ್ಯೆಗಳು ತಲೆದೋರಿದ್ದು, ರಾಗಿ ಖರೀದಿ ವೇಳೆ ಹಲವು ನಿಯಮಗಳಿಂದ ರೈತರು ಬೇಸತ್ತು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಪ್ರತಿವರ್ಷ ನಿಯಮಗಳು ಬದಲಾಗುತ್ತಿವೆ. ಇದರಿಂದ ರೈತರು ಹೈರಾಣಗಾಗಿದ್ದಾರೆ. ಸುಗಮ ಹಾದಿಯಲ್ಲಿ ರಾಗಿ ಖರೀದಿ ವ್ಯವಸ್ಥೆ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈಗಾಗಲೇ 13 ಸಾವಿರಕ್ಕೂ ಹೆಚ್ಚು ರೈತರು ನೊಂದಾಯಿಸಿಕೊಂಡಿದ್ದು, ಅವರಿಂದ ರಾಗಿ ಖರೀದಿಯನ್ನ ಮಾಡಲಾಗುತ್ತಿದೆ. ಆದರೆ, ಈ ವರ್ಷ ಕೆಲವು ನಿಯಮಗಳು ರೈತರನ್ನು ಹೈರಾಣು ಮಾಡಿದೆ.

ರೆಕಮೆಂಡೇಷನ್ ಇದ್ರೆ ಬೇಗ ಕೆಲಸ ಆಗುತ್ತೆ. ಏನೂ ಇಲ್ದೆ ಸೀರಿಯಲ್ ಪ್ರಕಾರ ಬರೋರು ಗಂಟೆಗಟ್ಟಲೇ ಕಾದರೂ ಏನೂ ಆಗಲ್ಲ. ಇದ್ದ ಜಾಗದಲ್ಲೇ ಇರಬೇಕಾದ ಪರಿಸ್ಥಿತಿ‌ ನಿರ್ಮಾಣವಾಗಿದೆ. ಇದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ವಾಹನಗಳು ದಿನಗಟ್ಟಲೆ ನಿಲ್ಲುವಂತಾಗಬಾರದು. ಒಂದು ದಿನಕ್ಕೆ ಎಷ್ಟು ಖರೀದಿ ಮಾಡಬಹುದೋ ಅಷ್ಟಕ್ಕೆ ಟೋಕನ್ ಗಳನ್ನು ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕು. ಎಪಿಎಂಸಿ ಆವರಣದಲ್ಲಿ ರೈತರಿಗೆ ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಕಡ್ಡಾಯವಾಗಿ ಆಗಬೇಕು. ತೂಕದ ವ್ಯವಸ್ಥೆಯಲ್ಲಿ ಲೋಪದೋಷಗಳು ಆಗಬಾರದು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದರು. ಆದರೆ, ಶಾಸಕರ ಮಾತಿಗೆ ಕಿಮ್ಮತ್ತು ಇಲ್ಲದಂತಾಗಿದೆ ಎಂದು ಅಧಿಕಾರಿಗಳ ವಿರುದ್ಧ ಗುಡುಗಿದರು.

ರೈತ ಸಂಘ ಮುಖಂಡ ಬಚ್ಚೇಗೌಡ ಮಾತನಾಡಿ, ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಹೊಸ ನಿಯಮಗಳಿಂದ ರೈತರು ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಟ್ರ್ಯಾಕ್ಟರ್ ಬಾಡಿಗೆ ದಿನಕ್ಕೆ ಎರಡರಿಂದ ಮೂರು ಸಾವಿರವಿದೆ‌. ಎರಡು ಮೂರು ದಿನ ಕಾಯುವುದರಿಂದ 10 ರಿಂದ 15 ಸಾವಿರ ಟ್ರ್ಯಾಕ್ಟರ್ ಬಾಡಿಗೆಗೆ ಹಣ ಹೋಗುತ್ತದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಕೊಡುವ ಹಣ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ಕಿಡಿಕಾರಿದರು.

ರೈತ ಅರಸೇಗೌಡ ಮಾತನಾಡಿ, ಈ ಮೊದಲು ಇಂಡೆಂಟ್ ತೆಗೆದುಕೊಳ್ಳುವಾಗ ಮಾತ್ರ ಬಯೋಮೆಟ್ರಿಕ್ ಕೊಡಬೇಕಿತ್ತು. ಈ ವರ್ಷ ರಾಗಿ ಹಾಕಿದ ನಂತರವೂ ಬಯೋಮೆಟ್ರಿಕ್ ಕೊಡಬೇಕಾಗಿದೆ. ಇದು ಸಮಸ್ಯೆಗೆ ಮೊದಲ ಕಾರಣವಾಗಿದೆ. ಬಹುತೇಕ ರೈತರ ಪಹಣಿಗಳಿರುವುದು ವಯಸ್ಸಾದವರ ಹೆಸರಿನಲ್ಲಿ. ಅವರು ಎರಡು ಮೂರು ದಿನ ಕಾಯುವ ಸ್ಥಿತಿಯಲ್ಲಿರುವುದಿಲ್ಲ. ಈಗಾಗಲೇ ಇಂಡೆಂಟ್ ತೆಗೆದುಕೊಂಡಿರುವ 30 ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ರಾಗಿ ಹಾಕಲು ಅವಕಾಶವೇ ಇಲ್ಲದಂತ್ತಾಗಿದೆ ಎಂದರು.

ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಪಬ್ಲಿಕ್ ಮಿರ್ಚಿ ಜೊತೆಗೆ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ರಾಗಿ ಖರೀದಿ ಅಧಿಕಾರಿ ಹೆಚ್.ಎನ್.ನಾರಾಯಣ್, ಎರಡು ಬಾರಿ ಬಯೋಮೆಟ್ರಿಕ್ ತೆಗೆದುಕೊಳ್ಳುವುದು ಸರ್ಕಾರ ಜಾರಿಗೆ ತಂದಿರುವ ನಿಯಮ. ರೈತರು ನಿಯಮ ಪಾಲನೆ ಮಾಡಬೇಕಾಗಿದೆ. ಇನ್ನೂ ರಾಗಿ ಖರೀದಿ ಪ್ರಕ್ರಿಯೆ ತಡವಾಗಲು ಕಾರಣ, ರಾಗಿ ಸಂಗ್ರಹಿಸುವ ಗೋದಾಮುಗಳಲ್ಲಿ ಈ ಬಾರಿ ಯಂತ್ರಗಳಿಂದ ಚೀಲ ಹೊಲೆಯಲಾಗುತ್ತಿದೆ. ವಿದ್ಯುತ್ ಸಮಸ್ಯೆ. ಕಾರ್ಮಿಕರ ಕೊರತೆಯಿಂದ ಸಮಸ್ಯೆಗಾಗಿದೆ. ಎರಡು ದಿನ ರಜೆ ಇದೆ. ಈ ಎರಡು‌ ದಿನಗಳಲ್ಲಿ ಸಮಸ್ಯೆಗಳು ಬಗೆಹರಿಯಲಿದ್ದು, ಸೋಮವಾರದಿಂದ ರಾಗಿ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದರು.

ರೈತರಿಗೆ ನಾವು ಕ್ರಮಸಂಖ್ಯೆಯೇ ಪ್ರಕಾರದಂತೆ ಬರುವಂತೆ ಹೇಳಲಾಗಿದೆ. ಒಮ್ಮೆಲೆ ಹೆಚ್ಚು ರೈತರು ಬರುವುದರಿಂದ ಬಂದ ರೈತರನ್ನ ವಾಪಸ್ ಕಳಿಸಲು ಆಗುವುದಿಲ್ಲ. ಇದರಿಂದ ಸಹ ಸಮಸ್ಯೆಯಾಗುತ್ತಿದೆ. ರೈತರು ಕ್ರಮ ಸಂಖ್ಯೆಯ ಪ್ರಕಾರ ಬರುವಂತೆ ಮನವಿ ಮಾಡಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

10 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

10 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

13 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

13 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

18 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

22 hours ago