ದೊಡ್ಡಬಳ್ಳಾಪುರದಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿ ಆರಂಭವಾಗಿ ಕೆಲವೇ ದಿನಗಳಲ್ಲಿ ಹಲವು ಸಮಸ್ಯೆಗಳು ತಲೆದೋರಿದ್ದು, ರಾಗಿ ಖರೀದಿ ವೇಳೆ ಹಲವು ನಿಯಮಗಳಿಂದ ರೈತರು ಬೇಸತ್ತು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಪ್ರತಿವರ್ಷ ನಿಯಮಗಳು ಬದಲಾಗುತ್ತಿವೆ. ಇದರಿಂದ ರೈತರು ಹೈರಾಣಗಾಗಿದ್ದಾರೆ. ಸುಗಮ ಹಾದಿಯಲ್ಲಿ ರಾಗಿ ಖರೀದಿ ವ್ಯವಸ್ಥೆ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ರೆಕಮೆಂಡೇಷನ್ ಇದ್ರೆ ಬೇಗ ಕೆಲಸ ಆಗುತ್ತೆ. ಏನೂ ಇಲ್ದೆ ಸೀರಿಯಲ್ ಪ್ರಕಾರ ಬರೋರು ಗಂಟೆಗಟ್ಟಲೇ ಕಾದರೂ ಏನೂ ಆಗಲ್ಲ. ಇದ್ದ ಜಾಗದಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘ ಮುಖಂಡ ಬಚ್ಚೇಗೌಡ ಮಾತನಾಡಿ, ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಹೊಸ ನಿಯಮಗಳಿಂದ ರೈತರು ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಟ್ರ್ಯಾಕ್ಟರ್ ಬಾಡಿಗೆ ದಿನಕ್ಕೆ ಎರಡರಿಂದ ಮೂರು ಸಾವಿರವಿದೆ. ಎರಡು ಮೂರು ದಿನ ಕಾಯುವುದರಿಂದ 10 ರಿಂದ 15 ಸಾವಿರ ಟ್ರ್ಯಾಕ್ಟರ್ ಬಾಡಿಗೆಗೆ ಹಣ ಹೋಗುತ್ತದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಕೊಡುವ ಹಣ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ಕಿಡಿಕಾರಿದರು.
ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಪಬ್ಲಿಕ್ ಮಿರ್ಚಿ ಜೊತೆಗೆ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ರಾಗಿ ಖರೀದಿ ಅಧಿಕಾರಿ ಹೆಚ್.ಎನ್.ನಾರಾಯಣ್, ಎರಡು ಬಾರಿ ಬಯೋಮೆಟ್ರಿಕ್ ತೆಗೆದುಕೊಳ್ಳುವುದು ಸರ್ಕಾರ ಜಾರಿಗೆ ತಂದಿರುವ ನಿಯಮ. ರೈತರು ನಿಯಮ ಪಾಲನೆ ಮಾಡಬೇಕಾಗಿದೆ. ಇನ್ನೂ ರಾಗಿ ಖರೀದಿ ಪ್ರಕ್ರಿಯೆ ತಡವಾಗಲು ಕಾರಣ, ರಾಗಿ ಸಂಗ್ರಹಿಸುವ ಗೋದಾಮುಗಳಲ್ಲಿ ಈ ಬಾರಿ ಯಂತ್ರಗಳಿಂದ ಚೀಲ ಹೊಲೆಯಲಾಗುತ್ತಿದೆ. ವಿದ್ಯುತ್ ಸಮಸ್ಯೆ. ಕಾರ್ಮಿಕರ ಕೊರತೆಯಿಂದ ಸಮಸ್ಯೆಗಾಗಿದೆ. ಎರಡು ದಿನ ರಜೆ ಇದೆ. ಈ ಎರಡು ದಿನಗಳಲ್ಲಿ ಸಮಸ್ಯೆಗಳು ಬಗೆಹರಿಯಲಿದ್ದು, ಸೋಮವಾರದಿಂದ ರಾಗಿ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದರು.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…