ದೊಡ್ಡಬಳ್ಳಾಪುರದಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿ ಆರಂಭವಾಗಿ ಕೆಲವೇ ದಿನಗಳಲ್ಲಿ ಹಲವು ಸಮಸ್ಯೆಗಳು ತಲೆದೋರಿದ್ದು, ರಾಗಿ ಖರೀದಿ ವೇಳೆ ಹಲವು ನಿಯಮಗಳಿಂದ ರೈತರು ಬೇಸತ್ತು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಪ್ರತಿವರ್ಷ ನಿಯಮಗಳು ಬದಲಾಗುತ್ತಿವೆ. ಇದರಿಂದ ರೈತರು ಹೈರಾಣಗಾಗಿದ್ದಾರೆ. ಸುಗಮ ಹಾದಿಯಲ್ಲಿ ರಾಗಿ ಖರೀದಿ ವ್ಯವಸ್ಥೆ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ರೆಕಮೆಂಡೇಷನ್ ಇದ್ರೆ ಬೇಗ ಕೆಲಸ ಆಗುತ್ತೆ. ಏನೂ ಇಲ್ದೆ ಸೀರಿಯಲ್ ಪ್ರಕಾರ ಬರೋರು ಗಂಟೆಗಟ್ಟಲೇ ಕಾದರೂ ಏನೂ ಆಗಲ್ಲ. ಇದ್ದ ಜಾಗದಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘ ಮುಖಂಡ ಬಚ್ಚೇಗೌಡ ಮಾತನಾಡಿ, ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಹೊಸ ನಿಯಮಗಳಿಂದ ರೈತರು ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಟ್ರ್ಯಾಕ್ಟರ್ ಬಾಡಿಗೆ ದಿನಕ್ಕೆ ಎರಡರಿಂದ ಮೂರು ಸಾವಿರವಿದೆ. ಎರಡು ಮೂರು ದಿನ ಕಾಯುವುದರಿಂದ 10 ರಿಂದ 15 ಸಾವಿರ ಟ್ರ್ಯಾಕ್ಟರ್ ಬಾಡಿಗೆಗೆ ಹಣ ಹೋಗುತ್ತದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಕೊಡುವ ಹಣ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ಕಿಡಿಕಾರಿದರು.
ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಪಬ್ಲಿಕ್ ಮಿರ್ಚಿ ಜೊತೆಗೆ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ರಾಗಿ ಖರೀದಿ ಅಧಿಕಾರಿ ಹೆಚ್.ಎನ್.ನಾರಾಯಣ್, ಎರಡು ಬಾರಿ ಬಯೋಮೆಟ್ರಿಕ್ ತೆಗೆದುಕೊಳ್ಳುವುದು ಸರ್ಕಾರ ಜಾರಿಗೆ ತಂದಿರುವ ನಿಯಮ. ರೈತರು ನಿಯಮ ಪಾಲನೆ ಮಾಡಬೇಕಾಗಿದೆ. ಇನ್ನೂ ರಾಗಿ ಖರೀದಿ ಪ್ರಕ್ರಿಯೆ ತಡವಾಗಲು ಕಾರಣ, ರಾಗಿ ಸಂಗ್ರಹಿಸುವ ಗೋದಾಮುಗಳಲ್ಲಿ ಈ ಬಾರಿ ಯಂತ್ರಗಳಿಂದ ಚೀಲ ಹೊಲೆಯಲಾಗುತ್ತಿದೆ. ವಿದ್ಯುತ್ ಸಮಸ್ಯೆ. ಕಾರ್ಮಿಕರ ಕೊರತೆಯಿಂದ ಸಮಸ್ಯೆಗಾಗಿದೆ. ಎರಡು ದಿನ ರಜೆ ಇದೆ. ಈ ಎರಡು ದಿನಗಳಲ್ಲಿ ಸಮಸ್ಯೆಗಳು ಬಗೆಹರಿಯಲಿದ್ದು, ಸೋಮವಾರದಿಂದ ರಾಗಿ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…