ದೊಡ್ಡಬಳ್ಳಾಪುರದಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿ ಆರಂಭವಾಗಿ ಕೆಲವೇ ದಿನಗಳಲ್ಲಿ ಹಲವು ಸಮಸ್ಯೆಗಳು ತಲೆದೋರಿದ್ದು, ರಾಗಿ ಖರೀದಿ ವೇಳೆ ಹಲವು ನಿಯಮಗಳಿಂದ ರೈತರು ಬೇಸತ್ತು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಪ್ರತಿವರ್ಷ ನಿಯಮಗಳು ಬದಲಾಗುತ್ತಿವೆ. ಇದರಿಂದ ರೈತರು ಹೈರಾಣಗಾಗಿದ್ದಾರೆ. ಸುಗಮ ಹಾದಿಯಲ್ಲಿ ರಾಗಿ ಖರೀದಿ ವ್ಯವಸ್ಥೆ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ರೆಕಮೆಂಡೇಷನ್ ಇದ್ರೆ ಬೇಗ ಕೆಲಸ ಆಗುತ್ತೆ. ಏನೂ ಇಲ್ದೆ ಸೀರಿಯಲ್ ಪ್ರಕಾರ ಬರೋರು ಗಂಟೆಗಟ್ಟಲೇ ಕಾದರೂ ಏನೂ ಆಗಲ್ಲ. ಇದ್ದ ಜಾಗದಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘ ಮುಖಂಡ ಬಚ್ಚೇಗೌಡ ಮಾತನಾಡಿ, ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಹೊಸ ನಿಯಮಗಳಿಂದ ರೈತರು ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಟ್ರ್ಯಾಕ್ಟರ್ ಬಾಡಿಗೆ ದಿನಕ್ಕೆ ಎರಡರಿಂದ ಮೂರು ಸಾವಿರವಿದೆ. ಎರಡು ಮೂರು ದಿನ ಕಾಯುವುದರಿಂದ 10 ರಿಂದ 15 ಸಾವಿರ ಟ್ರ್ಯಾಕ್ಟರ್ ಬಾಡಿಗೆಗೆ ಹಣ ಹೋಗುತ್ತದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಕೊಡುವ ಹಣ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ಕಿಡಿಕಾರಿದರು.
ರಾಗಿ ಖರೀದಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಪಬ್ಲಿಕ್ ಮಿರ್ಚಿ ಜೊತೆಗೆ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ರಾಗಿ ಖರೀದಿ ಅಧಿಕಾರಿ ಹೆಚ್.ಎನ್.ನಾರಾಯಣ್, ಎರಡು ಬಾರಿ ಬಯೋಮೆಟ್ರಿಕ್ ತೆಗೆದುಕೊಳ್ಳುವುದು ಸರ್ಕಾರ ಜಾರಿಗೆ ತಂದಿರುವ ನಿಯಮ. ರೈತರು ನಿಯಮ ಪಾಲನೆ ಮಾಡಬೇಕಾಗಿದೆ. ಇನ್ನೂ ರಾಗಿ ಖರೀದಿ ಪ್ರಕ್ರಿಯೆ ತಡವಾಗಲು ಕಾರಣ, ರಾಗಿ ಸಂಗ್ರಹಿಸುವ ಗೋದಾಮುಗಳಲ್ಲಿ ಈ ಬಾರಿ ಯಂತ್ರಗಳಿಂದ ಚೀಲ ಹೊಲೆಯಲಾಗುತ್ತಿದೆ. ವಿದ್ಯುತ್ ಸಮಸ್ಯೆ. ಕಾರ್ಮಿಕರ ಕೊರತೆಯಿಂದ ಸಮಸ್ಯೆಗಾಗಿದೆ. ಎರಡು ದಿನ ರಜೆ ಇದೆ. ಈ ಎರಡು ದಿನಗಳಲ್ಲಿ ಸಮಸ್ಯೆಗಳು ಬಗೆಹರಿಯಲಿದ್ದು, ಸೋಮವಾರದಿಂದ ರಾಗಿ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದರು.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…