ಜಿಲ್ಲೆಯಲ್ಲಿ 2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ನೋಂದಣಿಗೆ ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಇನ್ನೂ ನೋಂದಣಿ ಯಾಗದಿರುವ ರೈತರು ಆದಷ್ಟು ಬೇಗ ಹತ್ತಿರದ ಖರೀದಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5 ರಾಗಿ ಖರೀದಿ ಕೇಂದ್ರಗಳಿದ್ದು,
ನೆಲಮಂಗಲ ತಾಲ್ಲೂಕು:
1) ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು ಕೆಂಪಲಿಂಗನಹಳ್ಳಿ ಕ್ರಾಸ್ ಕುಣಿಗಲ್ ರಸ್ತೆ.
2) ವಿ.ಎಸ್.ಎಸ್.ಎನ್ ಕಳಲುಘಟ್ಟ ರೈತ ಕೇಂದ್ರ, ತ್ಯಾಮಗೊಂಡ್ಲು ಹೋಬಳಿ.
3) ವಿ.ಎಸ್.ಎಸ್.ಎನ್ ರೈತ ಕೇಂದ್ರ ಸೋಂಪುರ ಹೋಬಳಿ.
ದೊಡ್ಡಬಳ್ಳಾಪುರ ತಾಲ್ಲೂಕು:
1) ರೈತ ಭವನ ಕೇಂದ್ರ, ಎ.ಪಿ.ಎಂ.ಸಿ ಯಾರ್ಡ್.
2) ರೈತ ಸಂಪರ್ಕ ಕೇಂದ್ರ, ಸಾಸಲು ಹೋಬಳಿ.
ದೇವನಹಳ್ಳಿ ತಾಲ್ಲೂಕು: ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು, ಕುರುಬರ ದೊಡ್ಡಿ ರಸ್ತೆ.
ಹೊಸಕೋಟೆ ತಾಲ್ಲೂಕು: ಕೆ.ಎಫ್.ಸಿ.ಎಸ್.ಸಿ ಎಂ.ಡಿ.ಎಂ ಗೋದಾಮು, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 15 ರೊಳಗೆ ನೋಂದಾಯಿಸಿಕೊಳ್ಳಿ.
ಈಗಾಗಲೇ ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ನೋಂದಣಿಯನ್ನು ಪ್ರಾರಂಭಿಸಲಾಗಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…