Categories: ಕೋಲಾರ

ರಾಗಿ ಬೆಳೆ ನಷ್ಟ ಎಕರೆಗೆ 50 ಸಾವಿರ ಪರಿಹಾರಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿವು ಇಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ, ಮುಂಗಾರು ಮಳೆ ಇಲ್ಲದೆ ನಷ್ಟವಾಗಿರುವ ಪ್ರತಿ ಎಕರೆ ರಾಗಿ ಬೆಳೆಗೆ 50 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ರೈತಸಂಘದಿಂದ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಎತ್ತಿನ ಬಂಡಿಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು.

ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಮುಂಗಾರು ಮಳೆ ಇಲ್ಲದೆ ಬಿತ್ತನೆ ಆಗಿರುವ ರಾಗಿ ಬೆಳೆ ಒಣಗಿರುವ ಹಿನ್ನೆಲೆಯಲ್ಲಿ ರೈತರು ಸರಕಾರ ನೀಡುವ ಪರಿಹಾರಕ್ಕಾಗಿ ಕಾಯುತ್ತಿದ್ದರೆ, ರೈತರ ಸಮಸ್ಯೆಗೆ ಸ್ಪಂದಿಸಬೇಕಾದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಜಿಲ್ಲೆಯಲ್ಲಿ ಲಕ್ಷಾಂತರ ರೈತ ಕುಟುಂಬಗಳ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಜೀವನಾಡಿಯಾಗಿದ್ದ ಡಿಸಿಸಿ ಬ್ಯಾಂಕಿನಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಹಾರದ ಕುರಿತು ತನಿಖೆ ನಡೆಸಬೇಕು. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ತಮ್ಮ ಸ್ವಾಬಲಂಬಿ ಜೀವನ ನಡೆಸಲು ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಸಮಸ್ಯೆಯನ್ನು ಯಾಕೆ ಪರಿಗಣಿಸುತ್ತಿಲ್ಲ ಗ್ರಾಮೀಣ ಪ್ರದೇಶದ ಮಹಿಳೆಯರು ಪೊರಕೆ ಹಿಡಿದು ಬೀದಿಗೆ ಬರಬೆಕೇ ಎಂದು ಪ್ರಶ್ನೆ ಮಾಡಿದರು.

ಇನ್ನು ನಾಪತ್ತೆ ಆಗಿರುವ ಉಸ್ತುವಾರಿ ಸಚಿವರನ್ನು ಹುಡುಕಿಕೊಟ್ಟವರಿಗೆ ಜಿಲ್ಲೆಗೆ ಹರಿಯುತ್ತಿರುವ ಕೆ.ಸಿ ವ್ಯಾಲಿ ನೀರನ್ನು ಹಾಗೂ ದುಬಾರಿ ಆಗಿರುವ ಟೊಮೋಟೊವನ್ನು ವಿಧಾನಸೌಧದ 224 ಶಾಸಕರಿಗೆ ಉಚಿತವಾಗಿ ನೀಡುವ ಘೋಷಣೆ ಮಾಡಿದರು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆ ಎಂದರೆ ಅತ್ತೆ ಮನೆಯಲ್ಲಿ ಮೂರು ದಿನ ಸ್ವಂತ ಮನೆಯಲ್ಲಿ ಮೂರು ದಿನ ಎಂಬ ಗಾದೆಯಂತಾಗಿದೆ. ಜಿಲ್ಲೆಯ ಮೇಲೆ ಕಾಳಜಿ ಇಲ್ಲದಿದ್ದರೆ ಬೇರೆಯವರನ್ನು ನೇಮಕ ಮಾಡಿ ಇಲ್ಲವೇ ಜಿಲ್ಲೆಯನ್ನು ಪಕ್ಕದ ಆಂಧ್ರಕ್ಕೆ ಸೇರಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.

ಜಿಪಂ ಸಿಇಒ, ಎಸ್ಸೆನ್ನಾರ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರ ಹುದ್ದೆ ಸೇರಿದಂತೆ ಶೇ.50 ರಷ್ಟು ಹುದ್ದೆಗಳು ಖಾಲಿ ಇವೆ. ಇದರ ಕಡೆ ಗಮನ ಹರಿಸದೆ ಹಗರಣಗಳ ಬಗ್ಗೆ ಪ್ರತಿದಿನ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುವ ಮುಖಾಂತರ ಕಾಲಹರಣ ಮಾಡುತ್ತಿದ್ದು, ಜನಪ್ರತಿನಿದಿಗಳಿಗೆ ಮುಂದಿನ ದಿನಗಳಲ್ಲಿ ಜನರೇ ಉತ್ತರಿಸಲಿದ್ದಾರೆಂದು ಎಚ್ಚರಿಸಿದರು.

ವಾರದೊಳಗೆ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ನಷ್ಟವಾಗಿರುವ ರಾಗಿ ಬೆಳೆಗೆ 50 ಸಾವಿರ ಟೊಮೇಟೊ ಬೆಳೆಗೆ 2 ಲಕ್ಷ ಪರಿಹಾರ ವಿತರಣೆ ಮಾಡಬೇಕು ಇಲ್ಲವಾದರೆ ರೈತರ ಎಲ್ಲಾ ಬೆಳೆಗಳು ಜಾನುವಾರುಗಳ ಸಮೇತ ಮುಖ್ಯಮಂತ್ರಿ ಮನೆ ಮುಂದೆ ಆಹೋರಾತ್ರಿ ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಂದಾಯ ನಿರೀಕ್ಷಕ ರಾಜೇಂದ್ರ ಮನವಿ ಸ್ವೀಕರಿಸಿ, ಹಿರಿಯ ಅಧಿಕಾರಿಗಳ ಮೂಲಕ ತಮ್ಮ ಮನವಿಯನ್ನು ಸರಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಪಾರುಖ್‌ಪಾಷ, ರಾಜೇಶ್, ಚಂದ್ರಪ್ಪ, ಯಲ್ಲಪ್ಪ, ಆಂಜಿನಪ್ಪ, ಹರೀಶ್, ಸುಪ್ರೀಂ ಚಲ, ಶಶಿ, ಮುನಿರಾಜು, ಮಂಗಸಂದ್ರ ತಿಮ್ಮಣ್ಣ, ಶೈಲಜ, ನಾಗರತ್ನ, ಮುನಿಯಮ್ಮ, ಶೋಭ, ರಾಧ, ಚೌಡಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

7 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

8 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

8 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

11 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

18 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

18 hours ago