Categories: ಕೋಲಾರ

ರಾಗಿ ಬೆಳೆ ನಷ್ಟ ಎಕರೆಗೆ 50 ಸಾವಿರ ಪರಿಹಾರಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿವು ಇಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ, ಮುಂಗಾರು ಮಳೆ ಇಲ್ಲದೆ ನಷ್ಟವಾಗಿರುವ ಪ್ರತಿ ಎಕರೆ ರಾಗಿ ಬೆಳೆಗೆ 50 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ರೈತಸಂಘದಿಂದ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಎತ್ತಿನ ಬಂಡಿಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು.

ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಮುಂಗಾರು ಮಳೆ ಇಲ್ಲದೆ ಬಿತ್ತನೆ ಆಗಿರುವ ರಾಗಿ ಬೆಳೆ ಒಣಗಿರುವ ಹಿನ್ನೆಲೆಯಲ್ಲಿ ರೈತರು ಸರಕಾರ ನೀಡುವ ಪರಿಹಾರಕ್ಕಾಗಿ ಕಾಯುತ್ತಿದ್ದರೆ, ರೈತರ ಸಮಸ್ಯೆಗೆ ಸ್ಪಂದಿಸಬೇಕಾದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಜಿಲ್ಲೆಯಲ್ಲಿ ಲಕ್ಷಾಂತರ ರೈತ ಕುಟುಂಬಗಳ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಜೀವನಾಡಿಯಾಗಿದ್ದ ಡಿಸಿಸಿ ಬ್ಯಾಂಕಿನಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಹಾರದ ಕುರಿತು ತನಿಖೆ ನಡೆಸಬೇಕು. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ತಮ್ಮ ಸ್ವಾಬಲಂಬಿ ಜೀವನ ನಡೆಸಲು ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಸಮಸ್ಯೆಯನ್ನು ಯಾಕೆ ಪರಿಗಣಿಸುತ್ತಿಲ್ಲ ಗ್ರಾಮೀಣ ಪ್ರದೇಶದ ಮಹಿಳೆಯರು ಪೊರಕೆ ಹಿಡಿದು ಬೀದಿಗೆ ಬರಬೆಕೇ ಎಂದು ಪ್ರಶ್ನೆ ಮಾಡಿದರು.

ಇನ್ನು ನಾಪತ್ತೆ ಆಗಿರುವ ಉಸ್ತುವಾರಿ ಸಚಿವರನ್ನು ಹುಡುಕಿಕೊಟ್ಟವರಿಗೆ ಜಿಲ್ಲೆಗೆ ಹರಿಯುತ್ತಿರುವ ಕೆ.ಸಿ ವ್ಯಾಲಿ ನೀರನ್ನು ಹಾಗೂ ದುಬಾರಿ ಆಗಿರುವ ಟೊಮೋಟೊವನ್ನು ವಿಧಾನಸೌಧದ 224 ಶಾಸಕರಿಗೆ ಉಚಿತವಾಗಿ ನೀಡುವ ಘೋಷಣೆ ಮಾಡಿದರು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆ ಎಂದರೆ ಅತ್ತೆ ಮನೆಯಲ್ಲಿ ಮೂರು ದಿನ ಸ್ವಂತ ಮನೆಯಲ್ಲಿ ಮೂರು ದಿನ ಎಂಬ ಗಾದೆಯಂತಾಗಿದೆ. ಜಿಲ್ಲೆಯ ಮೇಲೆ ಕಾಳಜಿ ಇಲ್ಲದಿದ್ದರೆ ಬೇರೆಯವರನ್ನು ನೇಮಕ ಮಾಡಿ ಇಲ್ಲವೇ ಜಿಲ್ಲೆಯನ್ನು ಪಕ್ಕದ ಆಂಧ್ರಕ್ಕೆ ಸೇರಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.

ಜಿಪಂ ಸಿಇಒ, ಎಸ್ಸೆನ್ನಾರ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರ ಹುದ್ದೆ ಸೇರಿದಂತೆ ಶೇ.50 ರಷ್ಟು ಹುದ್ದೆಗಳು ಖಾಲಿ ಇವೆ. ಇದರ ಕಡೆ ಗಮನ ಹರಿಸದೆ ಹಗರಣಗಳ ಬಗ್ಗೆ ಪ್ರತಿದಿನ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುವ ಮುಖಾಂತರ ಕಾಲಹರಣ ಮಾಡುತ್ತಿದ್ದು, ಜನಪ್ರತಿನಿದಿಗಳಿಗೆ ಮುಂದಿನ ದಿನಗಳಲ್ಲಿ ಜನರೇ ಉತ್ತರಿಸಲಿದ್ದಾರೆಂದು ಎಚ್ಚರಿಸಿದರು.

ವಾರದೊಳಗೆ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ನಷ್ಟವಾಗಿರುವ ರಾಗಿ ಬೆಳೆಗೆ 50 ಸಾವಿರ ಟೊಮೇಟೊ ಬೆಳೆಗೆ 2 ಲಕ್ಷ ಪರಿಹಾರ ವಿತರಣೆ ಮಾಡಬೇಕು ಇಲ್ಲವಾದರೆ ರೈತರ ಎಲ್ಲಾ ಬೆಳೆಗಳು ಜಾನುವಾರುಗಳ ಸಮೇತ ಮುಖ್ಯಮಂತ್ರಿ ಮನೆ ಮುಂದೆ ಆಹೋರಾತ್ರಿ ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಂದಾಯ ನಿರೀಕ್ಷಕ ರಾಜೇಂದ್ರ ಮನವಿ ಸ್ವೀಕರಿಸಿ, ಹಿರಿಯ ಅಧಿಕಾರಿಗಳ ಮೂಲಕ ತಮ್ಮ ಮನವಿಯನ್ನು ಸರಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಪಾರುಖ್‌ಪಾಷ, ರಾಜೇಶ್, ಚಂದ್ರಪ್ಪ, ಯಲ್ಲಪ್ಪ, ಆಂಜಿನಪ್ಪ, ಹರೀಶ್, ಸುಪ್ರೀಂ ಚಲ, ಶಶಿ, ಮುನಿರಾಜು, ಮಂಗಸಂದ್ರ ತಿಮ್ಮಣ್ಣ, ಶೈಲಜ, ನಾಗರತ್ನ, ಮುನಿಯಮ್ಮ, ಶೋಭ, ರಾಧ, ಚೌಡಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

20 minutes ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

7 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

10 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

23 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago