Categories: ಕೋಲಾರ

ರಾಗಿ ಬೆಳೆ ನಷ್ಟ ಎಕರೆಗೆ 50 ಸಾವಿರ ಪರಿಹಾರಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿವು ಇಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ, ಮುಂಗಾರು ಮಳೆ ಇಲ್ಲದೆ ನಷ್ಟವಾಗಿರುವ ಪ್ರತಿ ಎಕರೆ ರಾಗಿ ಬೆಳೆಗೆ 50 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ರೈತಸಂಘದಿಂದ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಎತ್ತಿನ ಬಂಡಿಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು.

ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಮುಂಗಾರು ಮಳೆ ಇಲ್ಲದೆ ಬಿತ್ತನೆ ಆಗಿರುವ ರಾಗಿ ಬೆಳೆ ಒಣಗಿರುವ ಹಿನ್ನೆಲೆಯಲ್ಲಿ ರೈತರು ಸರಕಾರ ನೀಡುವ ಪರಿಹಾರಕ್ಕಾಗಿ ಕಾಯುತ್ತಿದ್ದರೆ, ರೈತರ ಸಮಸ್ಯೆಗೆ ಸ್ಪಂದಿಸಬೇಕಾದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಜಿಲ್ಲೆಯಲ್ಲಿ ಲಕ್ಷಾಂತರ ರೈತ ಕುಟುಂಬಗಳ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಜೀವನಾಡಿಯಾಗಿದ್ದ ಡಿಸಿಸಿ ಬ್ಯಾಂಕಿನಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಹಾರದ ಕುರಿತು ತನಿಖೆ ನಡೆಸಬೇಕು. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ತಮ್ಮ ಸ್ವಾಬಲಂಬಿ ಜೀವನ ನಡೆಸಲು ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಸಮಸ್ಯೆಯನ್ನು ಯಾಕೆ ಪರಿಗಣಿಸುತ್ತಿಲ್ಲ ಗ್ರಾಮೀಣ ಪ್ರದೇಶದ ಮಹಿಳೆಯರು ಪೊರಕೆ ಹಿಡಿದು ಬೀದಿಗೆ ಬರಬೆಕೇ ಎಂದು ಪ್ರಶ್ನೆ ಮಾಡಿದರು.

ಇನ್ನು ನಾಪತ್ತೆ ಆಗಿರುವ ಉಸ್ತುವಾರಿ ಸಚಿವರನ್ನು ಹುಡುಕಿಕೊಟ್ಟವರಿಗೆ ಜಿಲ್ಲೆಗೆ ಹರಿಯುತ್ತಿರುವ ಕೆ.ಸಿ ವ್ಯಾಲಿ ನೀರನ್ನು ಹಾಗೂ ದುಬಾರಿ ಆಗಿರುವ ಟೊಮೋಟೊವನ್ನು ವಿಧಾನಸೌಧದ 224 ಶಾಸಕರಿಗೆ ಉಚಿತವಾಗಿ ನೀಡುವ ಘೋಷಣೆ ಮಾಡಿದರು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆ ಎಂದರೆ ಅತ್ತೆ ಮನೆಯಲ್ಲಿ ಮೂರು ದಿನ ಸ್ವಂತ ಮನೆಯಲ್ಲಿ ಮೂರು ದಿನ ಎಂಬ ಗಾದೆಯಂತಾಗಿದೆ. ಜಿಲ್ಲೆಯ ಮೇಲೆ ಕಾಳಜಿ ಇಲ್ಲದಿದ್ದರೆ ಬೇರೆಯವರನ್ನು ನೇಮಕ ಮಾಡಿ ಇಲ್ಲವೇ ಜಿಲ್ಲೆಯನ್ನು ಪಕ್ಕದ ಆಂಧ್ರಕ್ಕೆ ಸೇರಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.

ಜಿಪಂ ಸಿಇಒ, ಎಸ್ಸೆನ್ನಾರ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರ ಹುದ್ದೆ ಸೇರಿದಂತೆ ಶೇ.50 ರಷ್ಟು ಹುದ್ದೆಗಳು ಖಾಲಿ ಇವೆ. ಇದರ ಕಡೆ ಗಮನ ಹರಿಸದೆ ಹಗರಣಗಳ ಬಗ್ಗೆ ಪ್ರತಿದಿನ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುವ ಮುಖಾಂತರ ಕಾಲಹರಣ ಮಾಡುತ್ತಿದ್ದು, ಜನಪ್ರತಿನಿದಿಗಳಿಗೆ ಮುಂದಿನ ದಿನಗಳಲ್ಲಿ ಜನರೇ ಉತ್ತರಿಸಲಿದ್ದಾರೆಂದು ಎಚ್ಚರಿಸಿದರು.

ವಾರದೊಳಗೆ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ನಷ್ಟವಾಗಿರುವ ರಾಗಿ ಬೆಳೆಗೆ 50 ಸಾವಿರ ಟೊಮೇಟೊ ಬೆಳೆಗೆ 2 ಲಕ್ಷ ಪರಿಹಾರ ವಿತರಣೆ ಮಾಡಬೇಕು ಇಲ್ಲವಾದರೆ ರೈತರ ಎಲ್ಲಾ ಬೆಳೆಗಳು ಜಾನುವಾರುಗಳ ಸಮೇತ ಮುಖ್ಯಮಂತ್ರಿ ಮನೆ ಮುಂದೆ ಆಹೋರಾತ್ರಿ ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಂದಾಯ ನಿರೀಕ್ಷಕ ರಾಜೇಂದ್ರ ಮನವಿ ಸ್ವೀಕರಿಸಿ, ಹಿರಿಯ ಅಧಿಕಾರಿಗಳ ಮೂಲಕ ತಮ್ಮ ಮನವಿಯನ್ನು ಸರಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಪಾರುಖ್‌ಪಾಷ, ರಾಜೇಶ್, ಚಂದ್ರಪ್ಪ, ಯಲ್ಲಪ್ಪ, ಆಂಜಿನಪ್ಪ, ಹರೀಶ್, ಸುಪ್ರೀಂ ಚಲ, ಶಶಿ, ಮುನಿರಾಜು, ಮಂಗಸಂದ್ರ ತಿಮ್ಮಣ್ಣ, ಶೈಲಜ, ನಾಗರತ್ನ, ಮುನಿಯಮ್ಮ, ಶೋಭ, ರಾಧ, ಚೌಡಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

1 hour ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

9 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

20 hours ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

22 hours ago

ಏ.19ಕ್ಕೆ ಸಾಸಲು ಚಿನ್ನಮ್ಮ ಉತ್ಸವ-2026

ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್…

1 day ago

ಇಸ್ರೇಲ್ ಮತ್ತು ಬೆಂಜಮಿನ್ ನೆತನ್ಯಾಹು……

ಶೌರ್ಯ, ಕ್ರೌರ್ಯ, ಆದರ್ಶ ಮತ್ತು ಎಚ್ಚರಿಕೆ....... ಇಸ್ರೇಲ್ ದೇಶದ ದ್ವೇಷದ ಬೆಂಕಿ ತನ್ನ ತಾನು ಸುಡುವುದಲ್ಲದೆ ಇತರರನ್ನೂ ಸುಡುತ್ತಿದೆ..... ಇಸ್ರೇಲ್…

1 day ago