Categories: ಕೋಲಾರ

ರಾಗಿ ಬೆಳೆ ನಷ್ಟ ಎಕರೆಗೆ 50 ಸಾವಿರ ಪರಿಹಾರಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅರಿವು ಇಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ, ಮುಂಗಾರು ಮಳೆ ಇಲ್ಲದೆ ನಷ್ಟವಾಗಿರುವ ಪ್ರತಿ ಎಕರೆ ರಾಗಿ ಬೆಳೆಗೆ 50 ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ರೈತಸಂಘದಿಂದ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಎತ್ತಿನ ಬಂಡಿಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು.

ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಮುಂಗಾರು ಮಳೆ ಇಲ್ಲದೆ ಬಿತ್ತನೆ ಆಗಿರುವ ರಾಗಿ ಬೆಳೆ ಒಣಗಿರುವ ಹಿನ್ನೆಲೆಯಲ್ಲಿ ರೈತರು ಸರಕಾರ ನೀಡುವ ಪರಿಹಾರಕ್ಕಾಗಿ ಕಾಯುತ್ತಿದ್ದರೆ, ರೈತರ ಸಮಸ್ಯೆಗೆ ಸ್ಪಂದಿಸಬೇಕಾದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಜಿಲ್ಲೆಯಲ್ಲಿ ಲಕ್ಷಾಂತರ ರೈತ ಕುಟುಂಬಗಳ ಹಾಗೂ ಸ್ತ್ರೀ ಶಕ್ತಿ ಸಂಘಗಳಿಗೆ ಜೀವನಾಡಿಯಾಗಿದ್ದ ಡಿಸಿಸಿ ಬ್ಯಾಂಕಿನಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಹಾರದ ಕುರಿತು ತನಿಖೆ ನಡೆಸಬೇಕು. ಗ್ರಾಮೀಣ ಭಾಗಗಳಲ್ಲಿ ಮಹಿಳೆಯರು ತಮ್ಮ ಸ್ವಾಬಲಂಬಿ ಜೀವನ ನಡೆಸಲು ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಸಮಸ್ಯೆಯನ್ನು ಯಾಕೆ ಪರಿಗಣಿಸುತ್ತಿಲ್ಲ ಗ್ರಾಮೀಣ ಪ್ರದೇಶದ ಮಹಿಳೆಯರು ಪೊರಕೆ ಹಿಡಿದು ಬೀದಿಗೆ ಬರಬೆಕೇ ಎಂದು ಪ್ರಶ್ನೆ ಮಾಡಿದರು.

ಇನ್ನು ನಾಪತ್ತೆ ಆಗಿರುವ ಉಸ್ತುವಾರಿ ಸಚಿವರನ್ನು ಹುಡುಕಿಕೊಟ್ಟವರಿಗೆ ಜಿಲ್ಲೆಗೆ ಹರಿಯುತ್ತಿರುವ ಕೆ.ಸಿ ವ್ಯಾಲಿ ನೀರನ್ನು ಹಾಗೂ ದುಬಾರಿ ಆಗಿರುವ ಟೊಮೋಟೊವನ್ನು ವಿಧಾನಸೌಧದ 224 ಶಾಸಕರಿಗೆ ಉಚಿತವಾಗಿ ನೀಡುವ ಘೋಷಣೆ ಮಾಡಿದರು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆ ಎಂದರೆ ಅತ್ತೆ ಮನೆಯಲ್ಲಿ ಮೂರು ದಿನ ಸ್ವಂತ ಮನೆಯಲ್ಲಿ ಮೂರು ದಿನ ಎಂಬ ಗಾದೆಯಂತಾಗಿದೆ. ಜಿಲ್ಲೆಯ ಮೇಲೆ ಕಾಳಜಿ ಇಲ್ಲದಿದ್ದರೆ ಬೇರೆಯವರನ್ನು ನೇಮಕ ಮಾಡಿ ಇಲ್ಲವೇ ಜಿಲ್ಲೆಯನ್ನು ಪಕ್ಕದ ಆಂಧ್ರಕ್ಕೆ ಸೇರಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದರು.

ಜಿಪಂ ಸಿಇಒ, ಎಸ್ಸೆನ್ನಾರ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರ ಹುದ್ದೆ ಸೇರಿದಂತೆ ಶೇ.50 ರಷ್ಟು ಹುದ್ದೆಗಳು ಖಾಲಿ ಇವೆ. ಇದರ ಕಡೆ ಗಮನ ಹರಿಸದೆ ಹಗರಣಗಳ ಬಗ್ಗೆ ಪ್ರತಿದಿನ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುವ ಮುಖಾಂತರ ಕಾಲಹರಣ ಮಾಡುತ್ತಿದ್ದು, ಜನಪ್ರತಿನಿದಿಗಳಿಗೆ ಮುಂದಿನ ದಿನಗಳಲ್ಲಿ ಜನರೇ ಉತ್ತರಿಸಲಿದ್ದಾರೆಂದು ಎಚ್ಚರಿಸಿದರು.

ವಾರದೊಳಗೆ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ನಷ್ಟವಾಗಿರುವ ರಾಗಿ ಬೆಳೆಗೆ 50 ಸಾವಿರ ಟೊಮೇಟೊ ಬೆಳೆಗೆ 2 ಲಕ್ಷ ಪರಿಹಾರ ವಿತರಣೆ ಮಾಡಬೇಕು ಇಲ್ಲವಾದರೆ ರೈತರ ಎಲ್ಲಾ ಬೆಳೆಗಳು ಜಾನುವಾರುಗಳ ಸಮೇತ ಮುಖ್ಯಮಂತ್ರಿ ಮನೆ ಮುಂದೆ ಆಹೋರಾತ್ರಿ ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಂದಾಯ ನಿರೀಕ್ಷಕ ರಾಜೇಂದ್ರ ಮನವಿ ಸ್ವೀಕರಿಸಿ, ಹಿರಿಯ ಅಧಿಕಾರಿಗಳ ಮೂಲಕ ತಮ್ಮ ಮನವಿಯನ್ನು ಸರಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಪಾರುಖ್‌ಪಾಷ, ರಾಜೇಶ್, ಚಂದ್ರಪ್ಪ, ಯಲ್ಲಪ್ಪ, ಆಂಜಿನಪ್ಪ, ಹರೀಶ್, ಸುಪ್ರೀಂ ಚಲ, ಶಶಿ, ಮುನಿರಾಜು, ಮಂಗಸಂದ್ರ ತಿಮ್ಮಣ್ಣ, ಶೈಲಜ, ನಾಗರತ್ನ, ಮುನಿಯಮ್ಮ, ಶೋಭ, ರಾಧ, ಚೌಡಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

22 minutes ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

11 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

22 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

22 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago