Categories: ಕೋಲಾರ

ರಾಗಿ ಹಾಗೂ ಭತ್ತ ಕಟಾವು ಮಾಡಲು ಖಾಸಗೀ ಯಂತ್ರಗಳ ಮೊರೆ ಹೋದ ರೈತರು: ಖಾಸಗಿ ಯಂತ್ರೋಪಕರಣ ಬಾಡಿಗೆ ಬೆಲೆ ಗಗನಕ್ಕೆ: ದುಬಾರಿ ಬೆಲೆಗೆ ಕಡಿವಾಣ ಹಾಕುವಂತೆ ರೈತ ಸಂಘದಿಂದ ಮನವಿ

ಕೋಲಾರ :ಪ್ರತಿ ಪಂಚಾಯಿತಿಗೊಂದು ರಾಗಿ ಹಾಗೂ ಭತ್ತ ಕಟಾವು ಯಂತ್ರೋಪಕರಣಗಳನ್ನು ಕೃಷಿ ಇಲಾಖೆಯಿಂದ ಉಚಿತವಗಿ ನೀಡುವ ಜೊತೆ ಖಾಸಗಿ ಯಂತ್ರಗಳ ದುಬಾರಿ ಬೆಲೆ ನಿಯಂತ್ರಣಕ್ಕೆ ಕಡಿವಾಣ ಹಾಕಿ ರೈತರ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದಿಂದ ಕೃಷಿ ಅಧಿಕಾರಿ ಮಹೇಶ್ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರೈತ ಸಂಘದ ರಾಜ್ಯ ಮುಖಂಡ ನಾರಾಯಣಗೌಡ ಮಾತನಾಡಿ ಜಿಲ್ಲೆಯಲ್ಲಿ ರಾಗಿ ಹಾಗೂ ಭತ್ತ ಬೆಳೆದಿರುವ ರೈತರಿಗೆ ಬೆಳೆಗಳನ್ನು ಸಕಾಲಕ್ಕೆ ಕಟಾವು ಮಾಡುವ ಯಂತ್ರೋಪಕರಣಗಳು ಸಿಗದೆ ತೀವ್ರ ಸಂಕಷ್ಠಕ್ಕೆ ಸಿಲುಕಿದ್ದಾರೆ ಸರ್ಕಾರ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಯಂತ್ರದಾರೆ ಯೋಜನೆಯನ್ನು ಸಮಪರ್ಕವಾಗಿ ನಿರ್ವಹಣೆ ಮಾಡದೇ ಸಂಪೂರ್ಣವಾಗಿ ನಿಕ್ಷಷ್ಟಿಯವಾಗಿದ್ದಾರೆ ಬೆಳೆ ಕಟಾವು ಮಾಡಲು ಸಕಾಲಕ್ಕೆ ಕೂಲಿ ಕಾರ್ಮಿಕರು ಸಿಗದೆ ವಿಧಿಯಿಲ್ಲದೆ ದುಪ್ಪಟ್ಟು ಹಣ ಪಾವತಿಸಿ ಖಾಸಗಿ ಯಂತ್ರೋಪಕರಣ ಕಡೆ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಅಲ್ಪವಾಗಿ ಬದ್ದಿದ್ದು, ಹಿಂಗಾರು ಮಳೆ ಉತ್ತಮವಾಗಿ ಬಿದ್ದ ಪರಿಣಾಮ ರಾಗಿ ಬೆಳೆ ಉತ್ತಮ ಫಸಲು ಬಂದಿದ್ದು ಕಟಾವಿನ ಹಂತದಲ್ಲಿದೆ ಆದರೆ ಬೆಳೆಯನ್ನು ಕಟಾವು ಮಾಡಲು ಕೂಲಿ ಕಾರ್ಮಿಕರು ಸಕಾಲಕ್ಕೆ ಸಿಗದೆ ರೈತರು ಪರದಾಡು ಪರಿಸ್ಥಿತಿ ಎದುರಾಗಿದೆ ಇದನ್ನೆ ಬಂಡಾವಾಳ ಮಾಡಿಕೊಂಡಿರುವ ಖಾಸಗೀ ಕಟಾವು ಯಂತ್ರೋಪರಣಗಳ ಮಾಲೀಕರು ದುಪ್ಪಟ್ಟ ಬೆಲೆಯನ್ನು ಪ್ರತಿ ಎಕರೆಗೆ ಆರರಿಂದ ಹತ್ತು ಸಾವಿರ ವರೆಗೆ ನಿಗದಿ ಮಾಡಿ ರೈನ್ನು ಆರ್ಥಿಕ ಸಂಕಷ್ಟಕ್ಕೆ ಈಡಾಗುಂತೆ ಮಾಡಿದ್ದಾರೆ ಜಿಲ್ಲೆಗೆ ಈಗಾಗಲೇ ತಮಿಳುನಾಡು ಆಂದ್ರದಿಂದ ಕಟಾವು ಯಂತ್ರಗಳು ಕಾಲಿಟ್ಟಿದ್ದು ಪ್ರತಿ ಎಕರೆ ತಮೆ ಇಷ್ಟ ಬಂದ ರೀತಿ ಧರ ನಿಗದಿ ರೈತರನ್ನು ಶೋಷಣೆ ಮಾಡುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಯಾಕೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೇಸ್ ಸರ್ಕಾರಿ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಕೃಡೀಕರಿಸಲು ಮುಂದಾಗಿರುವುದು ಬಿಟ್ಟರೆ ಕೃಷಿಯೇತರ ಚಟುವಟಿಕೆಗೆ ಅಂತಂತ್ರ ಪರಿಸ್ಥಿತಿ ಎದುರಿಸುತ್ತಿದೆ ರೈತರು ಬೆಳೆದಿರುವ ರಾಗಿ ಹಾಗೂ ಭತ್ತದ ಬೆಳೆಗಳನ್ನು ಸಕಾಲಕ್ಕೆ ಕಟಾವು ಮಾಡಿ ರಕ್ಷಣೆ ಮಾಡಿಕೊಳ್ಳಲು ಪರದಾಡುವ ಜೊತೆಗೆ ಕೃಷಿ ಇಲಾಖೆಯಿಂದ ಕಟಾವು ಯಂತ್ರಗಳು ಪರಾಡುವಂತಾಗಿದೆ ರೈತರಿಗೆ ಕೃಷಿ ಇಲಾಖೆಯಿಂದ ಕಟಾವು ಯಂತ್ರೋಪಕರಣಗಳನ್ನು ಉಚಿತವಾಗಿ ಇಲ್ಲದೆ ಸಬ್ಸಿಡಿ ರೂಪದಲ್ಲಿ ನೀಡುತ್ತಾರೆ ಎಂಬ ಆಶಾಭಾವನೆಯಿಂದ ಕಾದುಕುಳಿತಿದ್ದಾರೆ ಆದರೆ ಕೃಷಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಮಂತ್ರಿಗಳು ಇತ್ತ ಗಮನ ಹರಿಸದೇ ಇರುವುದು ಜಿಲ್ಲೆಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಅಧಿಕಾರಿ ಮಹೇಶ್ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಖಾಸಗೀ ಯಂತ್ರೋಪಕರಣಗಳ ಬೆಲೆ ನಿಗದಿ ಮಾಡುವುದಾಗಿ ಜೊತೆಗೆ ಖಾಸಗಿ ಯಂತ್ರಗಳು ದುಬಾರಿ ಬೆಲೆ ಪಡೆಯುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿ ಗೌಡ, ಫಾರೂಕ್ ಪಾಷಾ, ಮಂಗಸದ್ರ ತಿಮ್ಮಣ್ಣ , ಶಿವಾರೆಡ್ಡಿ, ಸುಪ್ರಿಂ ಚಲ, ಯಲ್ಲಣ್ಣ, ಹರೀಶ್, ಬಂಗಾವಾದಿ ನಾಗರಾಜಗೌಡ, ರತ್ನಮ್ಮ ಶೈಲಜ ಮುನಿರತ್ನಮ್ಮ ವೆಂಕಟಮ್ಮ, ಮುಂತಾದವರಿದ್ದರು.

Ramesh Babu

Journalist

Recent Posts

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

2 hours ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

2 hours ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

5 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

8 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

11 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

13 hours ago