Categories: ಕೋಲಾರ

ರಾಗಿ ಹಾಗೂ ಭತ್ತ ಕಟಾವು ಮಾಡಲು ಖಾಸಗೀ ಯಂತ್ರಗಳ ಮೊರೆ ಹೋದ ರೈತರು: ಖಾಸಗಿ ಯಂತ್ರೋಪಕರಣ ಬಾಡಿಗೆ ಬೆಲೆ ಗಗನಕ್ಕೆ: ದುಬಾರಿ ಬೆಲೆಗೆ ಕಡಿವಾಣ ಹಾಕುವಂತೆ ರೈತ ಸಂಘದಿಂದ ಮನವಿ

ಕೋಲಾರ :ಪ್ರತಿ ಪಂಚಾಯಿತಿಗೊಂದು ರಾಗಿ ಹಾಗೂ ಭತ್ತ ಕಟಾವು ಯಂತ್ರೋಪಕರಣಗಳನ್ನು ಕೃಷಿ ಇಲಾಖೆಯಿಂದ ಉಚಿತವಗಿ ನೀಡುವ ಜೊತೆ ಖಾಸಗಿ ಯಂತ್ರಗಳ ದುಬಾರಿ ಬೆಲೆ ನಿಯಂತ್ರಣಕ್ಕೆ ಕಡಿವಾಣ ಹಾಕಿ ರೈತರ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದಿಂದ ಕೃಷಿ ಅಧಿಕಾರಿ ಮಹೇಶ್ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರೈತ ಸಂಘದ ರಾಜ್ಯ ಮುಖಂಡ ನಾರಾಯಣಗೌಡ ಮಾತನಾಡಿ ಜಿಲ್ಲೆಯಲ್ಲಿ ರಾಗಿ ಹಾಗೂ ಭತ್ತ ಬೆಳೆದಿರುವ ರೈತರಿಗೆ ಬೆಳೆಗಳನ್ನು ಸಕಾಲಕ್ಕೆ ಕಟಾವು ಮಾಡುವ ಯಂತ್ರೋಪಕರಣಗಳು ಸಿಗದೆ ತೀವ್ರ ಸಂಕಷ್ಠಕ್ಕೆ ಸಿಲುಕಿದ್ದಾರೆ ಸರ್ಕಾರ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಯಂತ್ರದಾರೆ ಯೋಜನೆಯನ್ನು ಸಮಪರ್ಕವಾಗಿ ನಿರ್ವಹಣೆ ಮಾಡದೇ ಸಂಪೂರ್ಣವಾಗಿ ನಿಕ್ಷಷ್ಟಿಯವಾಗಿದ್ದಾರೆ ಬೆಳೆ ಕಟಾವು ಮಾಡಲು ಸಕಾಲಕ್ಕೆ ಕೂಲಿ ಕಾರ್ಮಿಕರು ಸಿಗದೆ ವಿಧಿಯಿಲ್ಲದೆ ದುಪ್ಪಟ್ಟು ಹಣ ಪಾವತಿಸಿ ಖಾಸಗಿ ಯಂತ್ರೋಪಕರಣ ಕಡೆ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಅಲ್ಪವಾಗಿ ಬದ್ದಿದ್ದು, ಹಿಂಗಾರು ಮಳೆ ಉತ್ತಮವಾಗಿ ಬಿದ್ದ ಪರಿಣಾಮ ರಾಗಿ ಬೆಳೆ ಉತ್ತಮ ಫಸಲು ಬಂದಿದ್ದು ಕಟಾವಿನ ಹಂತದಲ್ಲಿದೆ ಆದರೆ ಬೆಳೆಯನ್ನು ಕಟಾವು ಮಾಡಲು ಕೂಲಿ ಕಾರ್ಮಿಕರು ಸಕಾಲಕ್ಕೆ ಸಿಗದೆ ರೈತರು ಪರದಾಡು ಪರಿಸ್ಥಿತಿ ಎದುರಾಗಿದೆ ಇದನ್ನೆ ಬಂಡಾವಾಳ ಮಾಡಿಕೊಂಡಿರುವ ಖಾಸಗೀ ಕಟಾವು ಯಂತ್ರೋಪರಣಗಳ ಮಾಲೀಕರು ದುಪ್ಪಟ್ಟ ಬೆಲೆಯನ್ನು ಪ್ರತಿ ಎಕರೆಗೆ ಆರರಿಂದ ಹತ್ತು ಸಾವಿರ ವರೆಗೆ ನಿಗದಿ ಮಾಡಿ ರೈನ್ನು ಆರ್ಥಿಕ ಸಂಕಷ್ಟಕ್ಕೆ ಈಡಾಗುಂತೆ ಮಾಡಿದ್ದಾರೆ ಜಿಲ್ಲೆಗೆ ಈಗಾಗಲೇ ತಮಿಳುನಾಡು ಆಂದ್ರದಿಂದ ಕಟಾವು ಯಂತ್ರಗಳು ಕಾಲಿಟ್ಟಿದ್ದು ಪ್ರತಿ ಎಕರೆ ತಮೆ ಇಷ್ಟ ಬಂದ ರೀತಿ ಧರ ನಿಗದಿ ರೈತರನ್ನು ಶೋಷಣೆ ಮಾಡುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಯಾಕೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೇಸ್ ಸರ್ಕಾರಿ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಕೃಡೀಕರಿಸಲು ಮುಂದಾಗಿರುವುದು ಬಿಟ್ಟರೆ ಕೃಷಿಯೇತರ ಚಟುವಟಿಕೆಗೆ ಅಂತಂತ್ರ ಪರಿಸ್ಥಿತಿ ಎದುರಿಸುತ್ತಿದೆ ರೈತರು ಬೆಳೆದಿರುವ ರಾಗಿ ಹಾಗೂ ಭತ್ತದ ಬೆಳೆಗಳನ್ನು ಸಕಾಲಕ್ಕೆ ಕಟಾವು ಮಾಡಿ ರಕ್ಷಣೆ ಮಾಡಿಕೊಳ್ಳಲು ಪರದಾಡುವ ಜೊತೆಗೆ ಕೃಷಿ ಇಲಾಖೆಯಿಂದ ಕಟಾವು ಯಂತ್ರಗಳು ಪರಾಡುವಂತಾಗಿದೆ ರೈತರಿಗೆ ಕೃಷಿ ಇಲಾಖೆಯಿಂದ ಕಟಾವು ಯಂತ್ರೋಪಕರಣಗಳನ್ನು ಉಚಿತವಾಗಿ ಇಲ್ಲದೆ ಸಬ್ಸಿಡಿ ರೂಪದಲ್ಲಿ ನೀಡುತ್ತಾರೆ ಎಂಬ ಆಶಾಭಾವನೆಯಿಂದ ಕಾದುಕುಳಿತಿದ್ದಾರೆ ಆದರೆ ಕೃಷಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಮಂತ್ರಿಗಳು ಇತ್ತ ಗಮನ ಹರಿಸದೇ ಇರುವುದು ಜಿಲ್ಲೆಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಅಧಿಕಾರಿ ಮಹೇಶ್ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಖಾಸಗೀ ಯಂತ್ರೋಪಕರಣಗಳ ಬೆಲೆ ನಿಗದಿ ಮಾಡುವುದಾಗಿ ಜೊತೆಗೆ ಖಾಸಗಿ ಯಂತ್ರಗಳು ದುಬಾರಿ ಬೆಲೆ ಪಡೆಯುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿ ಗೌಡ, ಫಾರೂಕ್ ಪಾಷಾ, ಮಂಗಸದ್ರ ತಿಮ್ಮಣ್ಣ , ಶಿವಾರೆಡ್ಡಿ, ಸುಪ್ರಿಂ ಚಲ, ಯಲ್ಲಣ್ಣ, ಹರೀಶ್, ಬಂಗಾವಾದಿ ನಾಗರಾಜಗೌಡ, ರತ್ನಮ್ಮ ಶೈಲಜ ಮುನಿರತ್ನಮ್ಮ ವೆಂಕಟಮ್ಮ, ಮುಂತಾದವರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

3 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

8 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

9 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

11 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago