Categories: ಕೋಲಾರ

ರಾಗಿ ಹಾಗೂ ಭತ್ತ ಕಟಾವು ಮಾಡಲು ಖಾಸಗೀ ಯಂತ್ರಗಳ ಮೊರೆ ಹೋದ ರೈತರು: ಖಾಸಗಿ ಯಂತ್ರೋಪಕರಣ ಬಾಡಿಗೆ ಬೆಲೆ ಗಗನಕ್ಕೆ: ದುಬಾರಿ ಬೆಲೆಗೆ ಕಡಿವಾಣ ಹಾಕುವಂತೆ ರೈತ ಸಂಘದಿಂದ ಮನವಿ

ಕೋಲಾರ :ಪ್ರತಿ ಪಂಚಾಯಿತಿಗೊಂದು ರಾಗಿ ಹಾಗೂ ಭತ್ತ ಕಟಾವು ಯಂತ್ರೋಪಕರಣಗಳನ್ನು ಕೃಷಿ ಇಲಾಖೆಯಿಂದ ಉಚಿತವಗಿ ನೀಡುವ ಜೊತೆ ಖಾಸಗಿ ಯಂತ್ರಗಳ ದುಬಾರಿ ಬೆಲೆ ನಿಯಂತ್ರಣಕ್ಕೆ ಕಡಿವಾಣ ಹಾಕಿ ರೈತರ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದಿಂದ ಕೃಷಿ ಅಧಿಕಾರಿ ಮಹೇಶ್ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರೈತ ಸಂಘದ ರಾಜ್ಯ ಮುಖಂಡ ನಾರಾಯಣಗೌಡ ಮಾತನಾಡಿ ಜಿಲ್ಲೆಯಲ್ಲಿ ರಾಗಿ ಹಾಗೂ ಭತ್ತ ಬೆಳೆದಿರುವ ರೈತರಿಗೆ ಬೆಳೆಗಳನ್ನು ಸಕಾಲಕ್ಕೆ ಕಟಾವು ಮಾಡುವ ಯಂತ್ರೋಪಕರಣಗಳು ಸಿಗದೆ ತೀವ್ರ ಸಂಕಷ್ಠಕ್ಕೆ ಸಿಲುಕಿದ್ದಾರೆ ಸರ್ಕಾರ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಯಂತ್ರದಾರೆ ಯೋಜನೆಯನ್ನು ಸಮಪರ್ಕವಾಗಿ ನಿರ್ವಹಣೆ ಮಾಡದೇ ಸಂಪೂರ್ಣವಾಗಿ ನಿಕ್ಷಷ್ಟಿಯವಾಗಿದ್ದಾರೆ ಬೆಳೆ ಕಟಾವು ಮಾಡಲು ಸಕಾಲಕ್ಕೆ ಕೂಲಿ ಕಾರ್ಮಿಕರು ಸಿಗದೆ ವಿಧಿಯಿಲ್ಲದೆ ದುಪ್ಪಟ್ಟು ಹಣ ಪಾವತಿಸಿ ಖಾಸಗಿ ಯಂತ್ರೋಪಕರಣ ಕಡೆ ಮುಖ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಅಲ್ಪವಾಗಿ ಬದ್ದಿದ್ದು, ಹಿಂಗಾರು ಮಳೆ ಉತ್ತಮವಾಗಿ ಬಿದ್ದ ಪರಿಣಾಮ ರಾಗಿ ಬೆಳೆ ಉತ್ತಮ ಫಸಲು ಬಂದಿದ್ದು ಕಟಾವಿನ ಹಂತದಲ್ಲಿದೆ ಆದರೆ ಬೆಳೆಯನ್ನು ಕಟಾವು ಮಾಡಲು ಕೂಲಿ ಕಾರ್ಮಿಕರು ಸಕಾಲಕ್ಕೆ ಸಿಗದೆ ರೈತರು ಪರದಾಡು ಪರಿಸ್ಥಿತಿ ಎದುರಾಗಿದೆ ಇದನ್ನೆ ಬಂಡಾವಾಳ ಮಾಡಿಕೊಂಡಿರುವ ಖಾಸಗೀ ಕಟಾವು ಯಂತ್ರೋಪರಣಗಳ ಮಾಲೀಕರು ದುಪ್ಪಟ್ಟ ಬೆಲೆಯನ್ನು ಪ್ರತಿ ಎಕರೆಗೆ ಆರರಿಂದ ಹತ್ತು ಸಾವಿರ ವರೆಗೆ ನಿಗದಿ ಮಾಡಿ ರೈನ್ನು ಆರ್ಥಿಕ ಸಂಕಷ್ಟಕ್ಕೆ ಈಡಾಗುಂತೆ ಮಾಡಿದ್ದಾರೆ ಜಿಲ್ಲೆಗೆ ಈಗಾಗಲೇ ತಮಿಳುನಾಡು ಆಂದ್ರದಿಂದ ಕಟಾವು ಯಂತ್ರಗಳು ಕಾಲಿಟ್ಟಿದ್ದು ಪ್ರತಿ ಎಕರೆ ತಮೆ ಇಷ್ಟ ಬಂದ ರೀತಿ ಧರ ನಿಗದಿ ರೈತರನ್ನು ಶೋಷಣೆ ಮಾಡುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಯಾಕೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೇಸ್ ಸರ್ಕಾರಿ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಕೃಡೀಕರಿಸಲು ಮುಂದಾಗಿರುವುದು ಬಿಟ್ಟರೆ ಕೃಷಿಯೇತರ ಚಟುವಟಿಕೆಗೆ ಅಂತಂತ್ರ ಪರಿಸ್ಥಿತಿ ಎದುರಿಸುತ್ತಿದೆ ರೈತರು ಬೆಳೆದಿರುವ ರಾಗಿ ಹಾಗೂ ಭತ್ತದ ಬೆಳೆಗಳನ್ನು ಸಕಾಲಕ್ಕೆ ಕಟಾವು ಮಾಡಿ ರಕ್ಷಣೆ ಮಾಡಿಕೊಳ್ಳಲು ಪರದಾಡುವ ಜೊತೆಗೆ ಕೃಷಿ ಇಲಾಖೆಯಿಂದ ಕಟಾವು ಯಂತ್ರಗಳು ಪರಾಡುವಂತಾಗಿದೆ ರೈತರಿಗೆ ಕೃಷಿ ಇಲಾಖೆಯಿಂದ ಕಟಾವು ಯಂತ್ರೋಪಕರಣಗಳನ್ನು ಉಚಿತವಾಗಿ ಇಲ್ಲದೆ ಸಬ್ಸಿಡಿ ರೂಪದಲ್ಲಿ ನೀಡುತ್ತಾರೆ ಎಂಬ ಆಶಾಭಾವನೆಯಿಂದ ಕಾದುಕುಳಿತಿದ್ದಾರೆ ಆದರೆ ಕೃಷಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಮಂತ್ರಿಗಳು ಇತ್ತ ಗಮನ ಹರಿಸದೇ ಇರುವುದು ಜಿಲ್ಲೆಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಅಧಿಕಾರಿ ಮಹೇಶ್ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಖಾಸಗೀ ಯಂತ್ರೋಪಕರಣಗಳ ಬೆಲೆ ನಿಗದಿ ಮಾಡುವುದಾಗಿ ಜೊತೆಗೆ ಖಾಸಗಿ ಯಂತ್ರಗಳು ದುಬಾರಿ ಬೆಲೆ ಪಡೆಯುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿ ಗೌಡ, ಫಾರೂಕ್ ಪಾಷಾ, ಮಂಗಸದ್ರ ತಿಮ್ಮಣ್ಣ , ಶಿವಾರೆಡ್ಡಿ, ಸುಪ್ರಿಂ ಚಲ, ಯಲ್ಲಣ್ಣ, ಹರೀಶ್, ಬಂಗಾವಾದಿ ನಾಗರಾಜಗೌಡ, ರತ್ನಮ್ಮ ಶೈಲಜ ಮುನಿರತ್ನಮ್ಮ ವೆಂಕಟಮ್ಮ, ಮುಂತಾದವರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

14 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

17 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

18 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago