ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಭಸ್ಮವಾದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕಾಡತಿಪ್ಪೂರು ಗ್ರಾಮದಲ್ಲಿಂದು ನಡೆದಿದೆ.
ಗ್ರಾಮದ ವೆಂಕಟಪ್ಪ ಎಂಬುವರಿಗೆ ಸೇರಿದ ರಾಗಿ ಬಣವೆಗೆ ಇಂದು ಮಧ್ಯಾಹ್ನ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಅಂದಾಜು 1 ಲಕ್ಷ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿಯಾಗಿದೆ. ಕೂಡಲೇ ರೈತ ವೆಂಕಟಪ್ಪ ಹಾಗೂ ಸ್ಥಳೀಯರು ಪಕ್ಕದಲ್ಲೇ ಇದ್ದ ಹೊಂಡದಿಂದ ನೀರು ತಂದು ಸುರಿದು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ, ಬೆಂಕಿಯ ಕೆನ್ನಾಲಿಗೆ ನಿಮಿಷಗಳಲ್ಲೇ ಬಣವೆಯನ್ನು ಭಸ್ಮ ಮಾಡಿತು.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರಾಗಿ ಹುಲ್ಲು ಸಂಪೂರ್ಣ ಭಸ್ಮವಾಗಿದೆ. ಜಾನುವಾರುಗಳಿಗೆ ಮೇವಿಲ್ಲದೇ ರೈತ ವೆಂಕಟಪ್ಪ ಪರದಾಡುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…