ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಭಸ್ಮವಾದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕಾಡತಿಪ್ಪೂರು ಗ್ರಾಮದಲ್ಲಿಂದು ನಡೆದಿದೆ.
ಗ್ರಾಮದ ವೆಂಕಟಪ್ಪ ಎಂಬುವರಿಗೆ ಸೇರಿದ ರಾಗಿ ಬಣವೆಗೆ ಇಂದು ಮಧ್ಯಾಹ್ನ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆಗೆ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಅಂದಾಜು 1 ಲಕ್ಷ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿಯಾಗಿದೆ. ಕೂಡಲೇ ರೈತ ವೆಂಕಟಪ್ಪ ಹಾಗೂ ಸ್ಥಳೀಯರು ಪಕ್ಕದಲ್ಲೇ ಇದ್ದ ಹೊಂಡದಿಂದ ನೀರು ತಂದು ಸುರಿದು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ, ಬೆಂಕಿಯ ಕೆನ್ನಾಲಿಗೆ ನಿಮಿಷಗಳಲ್ಲೇ ಬಣವೆಯನ್ನು ಭಸ್ಮ ಮಾಡಿತು.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರಾಗಿ ಹುಲ್ಲು ಸಂಪೂರ್ಣ ಭಸ್ಮವಾಗಿದೆ. ಜಾನುವಾರುಗಳಿಗೆ ಮೇವಿಲ್ಲದೇ ರೈತ ವೆಂಕಟಪ್ಪ ಪರದಾಡುತ್ತಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…