ರಾಗಿ ಹುಲ್ಲು ತುಂಬಿದ್ದ ಕ್ಯಾಂಟರ್ ಗೆ ವಿದ್ಯುತ್ ಲೈನ್ ಸ್ಪರ್ಶ

ರಾಗಿ ಹುಲ್ಲು ತುಂಬಿದ್ದ ಕ್ಯಾಂಟರ್ ಗೆ ವಿದ್ಯುತ್ ಲೈನ್ ಸ್ಪರ್ಶವಾಗಿದ್ದು, ವಿದ್ಯುತ್ ಲೈನ್ ತಗುಲಿದ ಹಿನ್ನೆಲೆ ರಾಗಿ ಹುಲ್ಲಿಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ.

ಘಟನೆ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ…

ಭಕ್ತರಹಳ್ಳಿಯಿಂದ ವಿಜಯಪುರಕ್ಕೆ ಲಾರಿಯಲ್ಲಿ ಹುಲ್ಲು ಸಾಗಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದೆ. ಲಾರಿಯಲ್ಲಿದ್ದ 250 ಹೊರೆ ಹುಲ್ಲು ಸಂಪೂರ್ಣ ಬೂದಿಯಾಗಿದೆ.

ಪಕ್ಕದಲ್ಲೇ ಇದ್ದ ರೈತರ ಹುಲ್ಲಿನ ಬಣವೆಗೂ ಬೆಂಕಿ ಆವರಿಸಿದೆ. ಗ್ರಾಮಸ್ಥರಿಂದ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.

ಅಗ್ನಿಶಾಮಕ ಸಿಬ್ಬಂದಿ ಬರುವುದು ತಡವಾದ ಹಿನ್ನೆಲೆ ಗ್ರಾಮಸ್ಥರಿಂದಲೇ ಬೆಂಕಿ ನಂದಿಸುವ ಯತ್ನ ನಡೆದಿದೆ.

ಮನೆಯಲ್ಲಿದ್ದ ನೀರನೆಲ್ಲಾ ತಂದು ಹಾಕಿದರೂ ಬೆಂಕಿ ನಂದಿಸಲು ಅಸಾಧ್ಯವಾಗಿತ್ತು.

ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

1 hour ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago