ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈಜೋಡಿಸಿ ಜನಸಾಮಾನ್ಯರಿಗೆ ತೊಂದರೆ- ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಕಿಡಿ

ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ‌ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ.‌ ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ.‌ ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ‌ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ‌ ಎಂದು ಹೇಳಿದರು.

ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ‌ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತೇವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ‌. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ‌ ಉಪಾಧ್ಯಕ್ಷ ದೊಡ್ಡಯ್ಯ,‌ ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ,‌‌ ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ‌, ಗಂಗಧಾರಪ್ಪ, ಮಹಿಳಾ‌ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

4 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

14 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

15 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

20 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

22 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

1 day ago