ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈಜೋಡಿಸಿ ಜನಸಾಮಾನ್ಯರಿಗೆ ತೊಂದರೆ- ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಕಿಡಿ

ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ‌ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ.‌ ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ.‌ ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ‌ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ‌ ಎಂದು ಹೇಳಿದರು.

ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ‌ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತೇವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ‌. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ‌ ಉಪಾಧ್ಯಕ್ಷ ದೊಡ್ಡಯ್ಯ,‌ ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ,‌‌ ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ‌, ಗಂಗಧಾರಪ್ಪ, ಮಹಿಳಾ‌ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago