ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈಜೋಡಿಸಿ ಜನಸಾಮಾನ್ಯರಿಗೆ ತೊಂದರೆ- ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಕಿಡಿ

ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ‌ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ.‌ ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ.‌ ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ‌ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ‌ ಎಂದು ಹೇಳಿದರು.

ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ‌ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತೇವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ‌. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ‌ ಉಪಾಧ್ಯಕ್ಷ ದೊಡ್ಡಯ್ಯ,‌ ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ,‌‌ ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ‌, ಗಂಗಧಾರಪ್ಪ, ಮಹಿಳಾ‌ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

2 minutes ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

1 hour ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

2 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

3 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

14 hours ago