ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈಜೋಡಿಸಿ ಜನಸಾಮಾನ್ಯರಿಗೆ ತೊಂದರೆ- ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಕಿಡಿ

ಬಿಎಸ್ ಪಿಯನ್ನು ಇಡೀ ಕರ್ನಾಟಕದಲ್ಲಿ ಸದೃಢವಾಗಿ ಬಲಪಡಿಸಲು ಕರ್ನಾಟಕದಲ್ಲಿ ಆರು ವಲಯಗಳನ್ನಾಗಿ ಮಾಡಲಾಗಿದೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ಹಳ್ಳಿ ಹಳ್ಳಿಗೂ ಹೋಗಿ ಮತದಾನದ ಮಹತ್ವ, ಬಿಎಸ್ ಪಿ ಪಕ್ಷದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಬಿಎಸ್ ಪಿ ರಾಜ್ಯ ಸಂಯೋಜಕ ಆಶೋಕ್ ಚಕ್ರವರ್ತಿ‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ‌ ಮಟ್ಟದ ಬಿಎಸ್ ಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರ ಪಡೆಯಲು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಕಾರ್ಯಕರ್ತರಿಗೆ ತಿಳಿಸಿಕೊಡಲಾಗಿದೆ. ಪ್ರಸ್ತುತ ವಿದ್ಯಾವಂತರಿಗೆ ಉದ್ಯೋಗವಿಲ್ಲ. ಈಗಿನ ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡುತ್ತಿಲ್ಲ.‌ ಇರುವ ನೌಕರಿಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದರಿಂದ ನಿರುದ್ಯೋಗ ತಾಂಡವಾಡುತ್ತಿದೆ. ಎಲ್ಲವನ್ನೂ ಖಾಸಗಿತನ ಮಾಡಲು ಮುಂದಾಗುತ್ತಿದ್ದಾರೆ.‌ ಖಾಸಗಿಯವರು ಮೀಸಲಾತಿಯನ್ನು ಒಪ್ಪುವುದಿಲ್ಲ. ಇದರಿಂದ‌ ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಉದ್ಯೋಗ ಸಿಗದೇ ಹಾಗೇ ಇರಬೇಕಾಗುತ್ತದೆ‌ ಎಂದು ಹೇಳಿದರು.

ನಮ್ಮನ್ನು ಆಳಿದ ಆಳುತ್ತಿರುವ ಸರ್ಕಾರಗಳು ಎಸ್ ಸಿ, ಎಸ್ ಟಿ, ಓಬಿಸಿಯವರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿವೆ. ಆದರೆ ಬಿಎಸ್ ಪಿ ಅವರಂತೆ ಮಾಡಲ್ಲ. ಎಸ್ ಸಿ, ಎಸ್ ಟಿ, ಓಬಿಸಿಯವರಿಗೆ ಬೇಕಾಗುವಂತ ಸವಲತ್ತುಗಳನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನರಸಿಂಹಯ್ಯ ಮಾತನಾಡಿ, ಪಕ್ಷವನ್ನು ಬಲವರ್ಧನೆಗೊಳಿಸಿ, ಮನೆ, ಮನಸ್ಸು, ಮತಗಳ ಪರಿರ್ವತನೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಸ್ವಂತ ಶಕ್ತಿಯಿಂದ‌ ಸ್ಪರ್ಧಿಸಿ ಅಧಿಕಾರದ ಚುಕ್ಕಾಣಿ‌ ಹಿಡಿಯುತ್ತೇವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯಜನರಿಗೆ ಕೆಲಸಗಳು ಮಾಡಿಕೊಡುತ್ತಿಲ್ಲ. ಕೇವಲ ಉಳ್ಳವರಿಗೆ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ಮಾಡುತ್ತಿವೆ. ರಾಜಕಾರಣಿಗಳ‌ ಜೊತೆ ಅಧಿಕಾರಿಗಳು ಕೈ ಜೋಡಿಸಿ ಜನರಿಗೆ ತೊಂದರೆ ನೀಡಲಾಗುತ್ತಿದೆ‌. ಇದನ್ನು ಬಿಎಸ್ ಪಿ ಖಂಡಿಸುತ್ತದೆ ಎಂದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ‌ ಉಪಾಧ್ಯಕ್ಷ ದೊಡ್ಡಯ್ಯ,‌ ಹೊಸಕೋಟೆ ಬಲರಾಮಚಂದ್ರ, ದೊಡ್ಡಬಳ್ಳಾಪುರ ಪಿಳ್ಳಪ್ಪ, ನೆಲಮಂಗಲ ಮೂರ್ತಿ, ದೇವನಹಳ್ಳಿ ಎಂ.ಡಿ ರಾಮಾನಂಜಿನಪ್ಪ,‌‌ ತಾಲೂಕು ಉಸ್ತುವಾರಿಗಳಾದ ನಂಜಪ್ಪ, ಆರ್.ಸೋಮಶೇಖರ್, ನಾರಾಯಣಸ್ವಾಮಿ‌, ಗಂಗಧಾರಪ್ಪ, ಮಹಿಳಾ‌ ಕಾರ್ಯದರ್ಶಿಗಳಾದ ಸೌಭಾಗ್ಯ, ನಾಗಮಣಿ, ವಿಜಯಲಕ್ಷ್ಮಿ, ಸುವರ್ಣಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

6 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

7 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

8 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

9 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

16 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago